Homeಕರ್ನಾಟಕಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

- Advertisement -
- Advertisement -

“ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ರಾಜ್ಯಸಭೆಯಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹಲವರು ಕಿಡಿಕಾರಿದ್ದಾರೆ.

ಅಂಬೇಡ್ಕರ್ ವಿರುದ್ಧದ ಹೇಳಿಕೆ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ, ಕೇಂದ್ರ ಗೃಹ ಸಚಿವರಿಗೆ ತಿರುಗೇಟು ನೀಡಿದ್ದಾರೆ.

ಈ  ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್‌ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು” ಎಂದು ಹೇಳಿದ್ದಾರೆ.

“ಅಮಿತ್ ಶಹಾ ಅವರೇ, ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ” ಎಂದು ಸವಾಲು ಹಾಕಿದ್ದಾರೆ.

“ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ, ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ” ಎಂದು ಕಿಡಿಕಾರಿದ್ದಾರೆ.

“ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ. ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ” ಎಂದಿದ್ದಾರೆ.

“ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಯಾಕೆ ತಿರಸ್ಕರಿಸಿತ್ತು? ಆರ್‌ಎಸ್‌ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು. ಆದರೆ, ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್‌.ಸಿ. ಮಹದೇವಪ್ಪ ಆಗ್ರಹ

“ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

“ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದವರೆಗೆ ಸ್ವರ್ಗ ಸಿಗುತ್ತಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.

“ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ.
ಆದರೆ, ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ತಟ್ಟಿಕೊಂಡು ಹೇಳುತ್ತೇನೆ.
ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು” ಎಂದು ಹೇಳಿದ್ದಾರೆ.

“ಹೀಗಾಗಿ ಪುಣ್ಯಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ಜೊತೆಗೆ ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ” ಎಂದು ಅಮಿತ್ ಶಾ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...