HomeUncategorizedಮುಖ್ಯವಾಹಿನಿಗೆ ಬನ್ನಿ - ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಮುಖ್ಯವಾಹಿನಿಗೆ ಬನ್ನಿ – ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

- Advertisement -
- Advertisement -

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ  ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ” ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ‌ ಎಂದು ಹೇಳಿದ್ದಾರೆ.

“ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ.  ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...