HomeUncategorizedಮುಖ್ಯವಾಹಿನಿಗೆ ಬನ್ನಿ - ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಮುಖ್ಯವಾಹಿನಿಗೆ ಬನ್ನಿ – ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

- Advertisement -
- Advertisement -

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ  ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ” ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ‌ ಎಂದು ಹೇಳಿದ್ದಾರೆ.

“ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ.  ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...