HomeUncategorizedಮುಖ್ಯವಾಹಿನಿಗೆ ಬನ್ನಿ - ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಮುಖ್ಯವಾಹಿನಿಗೆ ಬನ್ನಿ – ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

- Advertisement -
- Advertisement -

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ  ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ” ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ‌ ಎಂದು ಹೇಳಿದ್ದಾರೆ.

“ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ.  ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...