Homeಕರ್ನಾಟಕವಿಧಾನಸಭೆಯಲ್ಲಿ 'ಹನಿಟ್ರ್ಯಾಪ್' ಗದ್ದಲ: ಸಿಎಂ ಏನಂದ್ರು?

ವಿಧಾನಸಭೆಯಲ್ಲಿ ‘ಹನಿಟ್ರ್ಯಾಪ್’ ಗದ್ದಲ: ಸಿಎಂ ಏನಂದ್ರು?

- Advertisement -
- Advertisement -

ಬೆಂಗಳೂರು : ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಮಾ.21) ವಿಧಾನಸಭೆಯಲ್ಲಿ ಹೇಳಿದರು.

ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಲಾಗಿದೆ ಎಂಬ ಆರೋಪದ ಕುರಿತು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ಶಾಸಕರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸದನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸಿಎಂ, “ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಬಲಿಪಶು  ಆಗಿದ್ದರೂ, ಅವರಿಗೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು” ಎಂದರು.

“ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಚಿವ ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಲಾಗಿದೆ ಎಂದು ಆರೋಪಿಸಿದ್ದರು. ಶಾಸಕರಾದ ಸುನಿಲ್ ಕುಮಾರ್, ಮುನಿರತ್ನ ಈ ಆರೋಪಕ್ಕೆ ಧ್ವನಿಗೂಡಿಸಿ ಚರ್ಚೆ ನಡೆಸಿದ್ದರು.

ಈ ವೇಳೆ ಸಚಿವ ರಾಜಣ್ಣ ಪ್ರತಿಕ್ರಿಯಿಸಿ, “48 ಜನರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇದರಲ್ಲಿ ಸಿಲುಕಿದವರು ಎರಡೂ ಪಕ್ಷದಲ್ಲಿ ಇದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರ ಹನಿಟ್ರ್ಯಾಪ್ ಪೆನ್ ಡ್ರೈವ್ ಇದೆ. ನನ್ನ ಮೇಲೆ ಆರೋಪಕ್ಕೆ ಇಲ್ಲಿ ಉತ್ತರ ಕೊಡಲ್ಲ. ನಾನು ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇವೆ. ಇದನ್ನು ತನಿಖೆ ಮಾಡಬೇಕು. ಯಾರು ನಿರ್ಮಾಪಕರು, ನಿರ್ದೇಶಕರು ಇದ್ದಾರೆ ಇವೆಲ್ಲವೂ ಹೊರಗಡೆ ಬರಲಿ. ಜನರಿಗೆ ಗೊತ್ತಾಗಲಿ” ಎಂದು ಹೇಳಿದ್ದರು.

ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ವಿಚಾರವಾಗಿ ಪ್ರತಿಕ್ರಿಯಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಭರವಸೆ ನೀಡಿದ್ದಾರೆ. ಆದರೆ, ಸದನದಲ್ಲಿ ಶುಕ್ರವಾರ ಕೂಡ ಬಿಜೆಪಿ ಶಾಸಕರು ಹನಿಟ್ರ್ಯಾಪ್ ವಿಚಾರ ಪ್ರಸ್ತಾಪಿಸಿದ್ದು, ಕೆಲಕಾಲ ಗಂಭೀರ ಚರ್ಚೆ ಮತ್ತು ಗದ್ದಲ ನಡೆಯಿತು.

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...