Homeಕರ್ನಾಟಕದೇವನಹಳ್ಳಿ| ಕೈಗಾರಿಕೆಗಳಿಗೆ ಬಂಜರು ಭೂಮಿ ಬಳಸಿ,  ಗ್ರಾಮ ಆಧಾರಿತ ಕೈಗಾರಿಕೆಗೆ ಉತ್ತೇಜನ ನೀಡಿ: ಸಿಎಂ ಸಿದ್ದರಾಮಯ್ಯಗೆ...

ದೇವನಹಳ್ಳಿ| ಕೈಗಾರಿಕೆಗಳಿಗೆ ಬಂಜರು ಭೂಮಿ ಬಳಸಿ,  ಗ್ರಾಮ ಆಧಾರಿತ ಕೈಗಾರಿಕೆಗೆ ಉತ್ತೇಜನ ನೀಡಿ: ಸಿಎಂ ಸಿದ್ದರಾಮಯ್ಯಗೆ ಮೇಧಾಪಾಟ್ಕರ್ ಪತ್ರ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯಲ್ಲಿ ಕೈಗಾರಿಕಾ ಯೋಜನೆಗಳಿಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪ್ರಸ್ತುತ ನಡೆಯುತ್ತಿರುವ ಅನ್ಯಾಯವನ್ನು ತಡೆಯುವಂತೆ ಮನವಿ ಮಾಡಿದ್ದಾರೆ. ರೈತರು ಮತ್ತು ಸಣ್ಣ ವ್ಯಾಪಾರಿಗಳು ನಗದು ಪರಿಹಾರಕ್ಕಿಂತ ಹೆಚ್ಚಾಗಿ ತಮ್ಮ ಪಾರಂಪರಿಕ ಜೀವನೋಪಾಯದ ಭೂಮಿಯ ರಕ್ಷಣೆಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ಈಗಾಗಲೇ 6000 ಎಕರೆಗೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೂ, ಸಂತ್ರಸ್ತರು ಇನ್ನೂ ಸೂಕ್ತ ಪುನರ್ವಸತಿ ಸಿಗದೆ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರವು ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ ಎಂದು ಪಾಟ್ಕರ್ ಅಭಿಪ್ರಾಯಪಟ್ಟಿದ್ದಾರೆ. ಯುಪಿಎ ಸರ್ಕಾರದ 2013ರ LARR ಕಾಯಿದೆಯು  ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜನಪರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿದರೂ, ಕರ್ನಾಟಕ ಸರ್ಕಾರವು KIADB ಕಾಯಿದೆಯಂತಹ ರಾಜ್ಯ ಮಟ್ಟದ ಕಾನೂನುಗಳನ್ನು ಬಳಸಿ ಈ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ಮೀರುತ್ತಿರುವುದು ವಿಪರ್ಯಾಸ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಪಾಟ್ಕರ್ ಅವರು ಪೊಲೀಸರ ನಡವಳಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, “ಸರ್ಕಾರವು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಫಲವತ್ತಾದ ಭೂಮಿಯನ್ನು ಉಳಿಸಲು ಆದ್ಯತೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ. ಕೈಗಾರಿಕೀಕರಣಕ್ಕೆ ಪೂರ್ಣ ವಿರೋಧವಿಲ್ಲದಿದ್ದರೂ, “ಅನ್ನದಾತ”ರಾದ ರೈತರ ಪ್ರಧಾನ ಕೃಷಿ ಭೂಮಿಯನ್ನು ಬೃಹತ್ ಕೈಗಾರಿಕೆಗಳ ಹೆಸರಿನಲ್ಲಿ ನಾಶಪಡಿಸುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಬೃಹತ್ ಯೋಜನೆಗಳ ಬದಲಿಗೆ ಸಣ್ಣ ಮತ್ತು ಗ್ರಾಮ ಆಧಾರಿತ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಪಾಟ್ಕರ್ ಸಲಹೆ ನೀಡಿದ್ದಾರೆ. ಅಲ್ಲದೆ, ಕೃಷಿಯೇತರ ಉದ್ದೇಶಗಳಿಗೆ ಸರ್ಕಾರಿ ಅಥವಾ ಬಂಜರು ಭೂಮಿಯನ್ನು ಬಳಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಎಲ್ಲ ಸಂಬಂಧಿತ ಸಚಿವರು ಜನರ ಧ್ವನಿಗೆ ಕಿವಿಗೊಟ್ಟು, ದೇವನಹಳ್ಳಿ ಯೋಜನೆಯನ್ನು ಹಿಂತೆಗೆದುಕೊಂಡು, ಸಂವಿಧಾನದ ಅನುಚ್ಛೇದ 21ರಡಿಯಲ್ಲಿ ನೀಡಲಾಗಿರುವ ‘ಜೀವಿಸುವ ಹಕ್ಕನ್ನು’ ರಕ್ಷಿಸಬೇಕು ಎಂದು ಮೇಧಾ ಪಾಟ್ಕರ್ ಮನವಿ ಮಾಡಿದ್ದಾರೆ. ಜುಲೈ 4ರಂದು ನಡೆಯುವ ಸಂವಾದದಲ್ಲಿ ಜನರ ಪರವಾದ ಸಕಾರಾತ್ಮಕ ನಿರ್ಧಾರವನ್ನು ನಿರೀಕ್ಷಿಸುವುದಾಗಿ ಅವರು ತಿಳಿಸಿದ್ದಾರೆ.

ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...