Homeಕರ್ನಾಟಕಮುಡಾ ಪ್ರಕರಣ | ವೈಟ್ನರ್ ಹಿಂದಿರುವುದೇನು? ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣ | ವೈಟ್ನರ್ ಹಿಂದಿರುವುದೇನು? ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ಕ್ಕೆ ಬರೆದಿದ್ದ ಪತ್ರಕ್ಕೆ ವೈಟ್ನರ್ ಹಾಕಿ ತಿದ್ದಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಆರೋಪಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.

ಪತ್ರದ ವೈಟ್ನರ್ ಹಾಕಿರುವ ಭಾಗಕ್ಕೆ ಲೈಟ್ ಹಿಡಿದು ತೋರಿಸುವ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ, ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದಿದ್ದಾರೆ.

“ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ–ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ” ಎಂದು ಸಿಎಂ ಬರೆದುಕೊಂಡಿದ್ದಾರೆ.

“ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ‘ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ’ ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ” ಎಂದಿದ್ದಾರೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು’ ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ” ಎಂದು ಸಿಎಂ ಕಿಡಿಕಾರಿದ್ದಾರೆ.

“ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ–ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ : ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...