Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...