Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...