Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...