Homeಕರ್ನಾಟಕಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.

“ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಧರಂ ಸಿಂಗ್ ಜೊತೆ ಸರ್ಕಾರ ರಚಿಸಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಹರಿಹಾಯ್ದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ, ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎರಡು ಬಾರಿ ಸಿಎಂ ಆದರೂ, ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು, ನಿಮ್ಮ ನಂಬಿಕೆಗೆ ದ್ರೋಹವೆಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದ್ದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದ್ದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ” ಎಂದು ಹೇಳಿದರು.

ನಾನು ಜಗ್ಗಲ್ಲ, ಬಗ್ಗಲ್ಲ : ಸಿದ್ದರಾಮಯ್ಯ

“ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ, ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ” ಎಂದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಝ್ ಮಾಡಿದ್ದಾರೆ. ಹೀಗಾಗಿ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ನಾಚಿಕೆ ಆಗಲ್ವಾ?

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ” ಎಂದು ಪ್ರಶ್ನಿಸಿದರು.

“ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : “ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ”: ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...