Homeಕರ್ನಾಟಕಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ನಾಯಕರ ರಾಜಕೀಯ ಹೇಳಿಕೆಗಳನ್ನು ಕಸದ ಬುಟ್ಟಿಗೆ ಎಸೆಯಿರಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ"-ಸಿಎಂ

- Advertisement -
- Advertisement -

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ದ ಹೇಳಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ಕೊಟ್ಟಿದ್ದು, ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋದಧ ಹಿಂದಿನ ದುರುದ್ದೇಶ ಎಂದು ಟೀಕಿಸಿದ್ದಾರೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ ಎಂದು ಸಿಎಂ ನೆನಪಿಸಿದ್ಧಾರೆ.

ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...