Homeಕರ್ನಾಟಕಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ

ಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟ ಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು, ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ ಎಂದಿದ್ದಾರೆ.

ಬಿಜೆಪಿಯ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದ ನಾಯಕರು ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರೇ ಬಹಿರಂಗವಾಗಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಸಿಎಂ ಕೇಳಿದ್ದಾರೆ.

ಮುಸ್ಲಿಮರಲ್ಲಿನ ಹಿಂದುಳಿಯುವಿಕೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ತಿಳಿದುಕೊಳ್ಳಲು ಬಯಸುವುದಾದರೆ ಈ ಬಗ್ಗೆಯೇ ಅಧ್ಯಯನ ಮಾಡಿರುವ ಸಾಚಾರ್ ಸಮಿತಿಯ ವರದಿಯನ್ನು ಪರಿಶೀಲಿಸುವ ಕಷ್ಟ ತೆಗೆದುಕೊಳ್ಳಬೇಕು. ಆ ವರದಿಯ ಪ್ರಕಾರ ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿಯೇ ತಲಾಖ್ ನಿಷೇಧ ಮಾಡಿದ್ದೇವೆ, ವಕ್ಪ್ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಒಂದೆಡೆ ತಮ್ಮನ್ನು ಮುಸ್ಲಿಂ ಸಮುದಾಯದ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು, ಇನ್ನೊಂದೆಡೆ ಬಜರಂಗದಳದ ಕಾರ್ಯಕರ್ತನಂತೆ ಕೋಮುದ್ವೇಷವನ್ನು ಉಗುಳುತ್ತಿರುವುದು ಅವರು ಕೂತಿರುವ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದಿದ್ದಾರೆ.

ವಕ್ಪ್ ಬೋರ್ಡಿನಲ್ಲಿ ಮುಸ್ಲಿಮೇತರರನ್ನು ಕಡ್ಡಾಯವಾಗಿ ಸದಸ್ಯರನ್ನಾಗಿ ಮಾಡುವ ತಿದ್ದುಪಡಿ ಕೋಮುದ್ವೇಷದಿಂದ ಕೂಡಿರುವುದು ಮೇಲ್ನೋಟದಲ್ಲಿಯೇ ಸಾಬೀತಾಗುತ್ತದೆ. ಇದೇ ಮಾನದಂಡವನ್ನು ಮುಂದಿನ ದಿನಗಳಲ್ಲಿ ಹಿಂದೂ ಮಠ-ಮಂದಿರಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹುಟ್ಟಿಕೊಂಡರೆ ಸಮಾಜದಲ್ಲಿ ಅನವಶ್ಯಕವಾಗಿ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವುದಿಲ್ಲವೇ? ದೇಶದ ಪ್ರಧಾನಿಯಾದವರು ಇಂತಹ ಸಂಘರ್ಷಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕೇ ಹೊರತು ಹುಟ್ಟು ಹಾಕುವುದಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಲಾಗಿದೆ ಎನ್ನುವ ಇನ್ನೊಂದು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂತಹ ಆಧಾರ-ತಲೆಬುಡ ಇಲ್ಲದ ಆರೋಪಗಳನ್ನು ಮಾಡುವಾಗ ಪ್ರಧಾನಿಯವರು ಕನಿಷ‍್ಠ ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನವನ್ನಾದರೂ ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ. ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ಧಾರೆ.

ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...