Homeಕರ್ನಾಟಕಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ...

ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಕೊನೆಗೂ ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ”ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳಲ್ಲಿ ಪ್ರಮುಖವಾದವು ಐದು ಗ್ಯಾರಂಟಿ ಯೋಜನೆಗಳು. ಆ ಐದರಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ದತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

”2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಹಿಂದಿನ ನಮ್ಮ ಸರ್ಕಾರ ಈಡೇರಿಸಿದ್ದು, ಅದರ ಬಗೆಗಿನ ವಿವರವಾದ ಅಧಿಕೃತ ಮಾಹಿತಿಯನ್ನು ರಾಜ್ಯದ ಜನರ ಮುಂದಿಟ್ಟಿದ್ದೇವೆ. ಈ ನಮ್ಮ ಬದ್ದತೆ ಕೂಡಾ ನಿಮಗೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆʼʼ ಎಂದು ಹೇಳಿದ್ಧಾರೆ.

”2014 ಮತ್ತು 2018ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ ಬಿಡುಗಡೆಗೊಳಿಸಿರುವ ಎರಡು ಪ್ರಣಾಳಿಕೆಗಳು ನನ್ನ ಮುಂದಿದೆ. ಮೂರನೇ ಬಾರಿ ಪ್ರಧಾನ ಮಂತ್ರಿಯಾಗಲು ಹೊರಟಿರುವ ನರೇಂದ್ರ ಮೋದಿಯವರೇ, ದಯವಿಟ್ಟು ಈ ಎರಡು ಪ್ರಣಾಳಿಕೆಗಳಲ್ಲಿನ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಲೆಕ್ಕವನ್ನು ನಮಗಲ್ಲವಾದರೂ ದೇಶದ ಜನತೆಗೆ ಕೊಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್ ಚೌಧರಿ ವಾಗ್ದಾಳಿ

”ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನೇತೃತ್ವದ ಕೆಂದ್ರ ಸರ್ಕಾರವು ಬಹಳಷ್ಟು ಮೀನಮೇಷ ಎಣಿಸಿದ ನಂತರ ಅಂತಿಮವಾಗಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ರೂ.200 ಕಡಿಮೆ ಮಾಡಿ ಘೋಷಣೆ ಮಾಡಿದೆ. ಆದರೆ, ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ ಎನ್ನುವುದು ನಿಚ್ಚಳಗೊಂಡಿದೆ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಎಂದು ನಿಮ್ಮದೇ ಮಂತ್ರಿಮಂಡಲದ ಸಚಿವರು ಹೇಳುವ ಮೂಲಕ ಅದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

”ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಅನಿಲ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ” ಎಂದು ಅವರು ಟೀಕಿಸಿದ್ದಾರೆ.

”ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅವರ ಪಕ್ಷದಲ್ಲಿ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು” ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...