Homeಕರ್ನಾಟಕಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇಂದು (ಮೇ 1, 2024) ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್‌ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ. ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್‌ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, 2024ರ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ ಪ್ರಕರಣದ ಬಗ್ಗೆ ನಿಮಗೆ ತಿಳಿದಿರಲೇಬೇಕು. ಪ್ರಜ್ವಲ್ ರೇವಣ್ಣ ಅವರು ಎದುರಿಸುತ್ತಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿತನದ್ದಾಗಿದ್ದು, ಇದು ದೇಶದ ಆತ್ಮಸಾಕ್ಷಿಯನ್ನೇ ಅಲ್ಲಾಡಿಸಿದೆ” ಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.

“ಕರ್ನಾಟಕ ಸರ್ಕಾರ ಏಪ್ರಿಲ್ 28ರಂದು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ (ಸಿಐಡಿ) ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ತನಿಖೆಯನ್ನು ಸರಿಯಾದ ರೀತಿಯಲ್ಲಿ ಪ್ರಾರಂಭಿಸಿದೆ. ಹಲವಾರು ಮಹಿಳೆಯರ ವಿರುದ್ಧದ ಆಪಾದಿತ ಅಪರಾಧಗಳ ನೈಜ ಸ್ವರೂಪ ಹೊರಬಿದ್ದ ಕೂಡಲೇ ಸಂತ್ರಸ್ತರು ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಲು ಎಸ್‌ಐಟಿ ರಚನೆ ಮಾಡಲಾಗಿದ್ದು, ಏಪ್ರಿಲ್ 28ರಂದು ಎಫ್‌ಐಆರ್ ಕೂಡ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

“ವರದಿಗಳ ಪ್ರಕಾರ, ಪೊಲೀಸ್ ಪ್ರಕರಣ ಮತ್ತು ಬಂಧನವನ್ನು ಗ್ರಹಿಸಿದ್ದ ಆರೋಪಿ ಸಂಸದ ಮತ್ತು ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 27ರಂದು ದೇಶ ಬಿಟ್ಟು ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ” ಎಂದಿದ್ದಾರೆ.

“ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಮಾಡಿದ್ದಾರೆನ್ನಲಾದ ಅಪರಾಧಗಳ ಆರೋಪಗಳ ತನಿಖೆಗೆ ಎಸ್‌ಐಟಿ ಹಗಲಿರುಳು ಶ್ರಮಿಸುತ್ತಿರುವಾಗ, ಅವರನ್ನು ದೇಶಕ್ಕೆ ಮರಳಿ ಕರೆ ತರುವುದು ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಅವರು ದೇಶದ ಕಾನೂನಿನ ಪ್ರಕಾರ ತನಿಖೆ ಮತ್ತು ವಿಚಾರಣೆಯನ್ನು ಎದುರಿಸಬೇಕಿದೆ.” ಎಂದು ಹೇಳಿದ್ದಾರೆ.

“ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ ಮತ್ತು ಪೊಲೀಸ್ ವ್ಯವಸ್ಥೆಗಳನ್ನು ಬಳಸಿಕೊಂಡು ಮತ್ತು ಇತರ ಕ್ರಮಗಳನ್ನು ಕೈಗೊಳ್ಳಲು ವಿದೇಶಾಂಗ ವ್ಯವಹಾರ ಮತ್ತು ಗೃಹ ವ್ಯವಹಾರಗಳ ಸಚಿವಾಲಯಗಳನ್ನು ಒತ್ತಾಯಿಸಲು ಈ ಪತ್ರ ಬರೆಯಲಾಗಿದೆ. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳ ನೆರವಿನಿಂದ ಕಾನೂನನ್ನು ಎದುರಿಸಲು ಪರಾರಿಯಾದ ಸಂಸತ್ ಸದಸ್ಯನನ್ನು ಶೀಘ್ರವೇ ವಾಪಸ್ ವಿದೇಶದಿಂದ ಕರೆತರಲು ಮನವಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಎಸ್ಐಟಿ ಎಲ್ಲಾ ಅಗತ್ಯ ವಿವರಗಳನ್ನು ಒದಗಿಸಲಿದೆ” ಎಂದು ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಕೆಲ ವರದಿಗಳು ಪ್ರಜ್ವಲ್ ಮೇ 3ರಂದು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರಿಗೂ ಏಪ್ರಿಲ್ 30ರಂದು ನೋಟಿಸ್ ಜಾರಿ ಮಾಡಿದೆ. 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...