Homeಕರ್ನಾಟಕಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

- Advertisement -
- Advertisement -

ಮುಡಾ ಪ್ರಕರಣ ಸಂಬಂಧ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 29ಕ್ಕೆ ನಿಗದಿ ಮಾಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು.

“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದ್ದು,ಈ ಮೂಲಕ ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಲಾಗಿದೆ. ಸಚಿವ ಸಂಪುಟದ ಸಲಹೆಯನ್ನು ರಾಜ್ಯಪಾಲರು ನಿರಾಕರಿಸಿದ್ದಾರೆ. ಯಾವ ಕಾರಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅಂಶವನ್ನೇ ಅವರು ಇನ್ನೂ ವಿವರಿಸಿಲ್ಲ. ಹಾಗಾಗಿ, ಈ ಅನುಮತಿ ರಾಜಕೀಯ ದುರುದ್ಧೇಶಗಳಿಂದ ಕೂಡಿರುವುದಾಗಿ ಪರಿಗಣಿಸಬೇಕು” ಎಂದು ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದ್ದಾರೆ.

“ನಿವೇಶನಗಳ ಬದಲಿ ಹಂಚಿಕೆ ಮಾಡಿರುವ ಪ್ರಕ್ರಿಯೆ ಈ ಬಿಜೆಪಿಯ ಅಧಿಕಾರವದಿಯಲ್ಲಿ ಅವಧಿಯಲ್ಲಿ ನಡೆದಿದೆ. ಸಿದ್ದರಾಮಯ್ಯ ವಿರುದ್ದ ಯಾವುದೇ ದಾಖಲೆಗಳು ಕಂಡು ಬಂದಿಲ್ಲ ಅಲ್ಲದೆ, ಭಾರತೀಯ ನಾಗರಿಕ ನ್ಯಾಯ ಸಂಹಿತೆಯ ಸೆಕ್ಷನ್ 218ರ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಆದರೆ, ಈ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕಾದಲ್ಲಿ ನಿರ್ದಿಷ್ಟ ಅಪರಾಧವನ್ನು ಒಳಗೊಂಡಿರಬೇಕು. ಅಲ್ಲದೆ, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅದು ನಡೆದಿರಬೇಕು ” ಎಂದು ಹೇಳಿದ್ದಾರೆ.

ವಕೀಲ ಟಿಜೆ ಅಬ್ರಾಹಂ ದೂರು ಸಲ್ಲಿಸಿದ ದಿನವೇ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸುಮಾರು 12 ಅರ್ಜಿಗಳು ಬಾಕಿಯಿವೆ. ಅವೆಲ್ಲನ್ನು ಬಿಟ್ಟು ದೂರು ಕೊಟ್ಟ ತಕ್ಷಣದಲ್ಲಿ ನೋಟಿಸಿ ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಉದ್ದೇಶವಾಗಿದೆ” ಎಂದು ವಿವರಿಸಿದ್ದಾರೆ.

ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ಸಿದ್ದರಾಮಯ್ಯ ವಿರುದ್ದ ಕ್ರಮ ಕೈಗೊಳ್ಳಲು ಅನುಮತಿ ನಿರಾಕರಿಸಿದ ಸಚಿವ ಸಂಪುಟದ ನಿರ್ಧಾರವು, ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ರಿಟ್‌ ಅರ್ಜಿಯನ್ನೇ ಹೋಲುತ್ತದೆ. ಆದ್ದರಿಂದ ಅದು ಪಕ್ಷಪಾತಿ ನಿರ್ಧಾರ ಆಗುವ ಆತಂಕವಿದೆ ಎಂದಿದ್ದಾರೆ.

ರಾಜ್ಯಪಾಲರು ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದರೂ, ಮುಖ್ಯಮಂತ್ರಿಯ ಸಂದರ್ಭದಲ್ಲಿ ಅಥವಾ ರಾಜ್ಯಪಾಲರು ಸ್ವತಃ ಅನುಮತಿ ನೀಡಬೇಕಾದ ಸಂದರ್ಭಗಳಲ್ಲಿ ವಿನಾಯಿತಿ ನೀಡಬಹುದು ಎಂದು ವಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್‌ 29ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಇದರ ಜೊತೆಗೆ ಆ.29ರ ವರೆಗೂ ಕೆಳ ನ್ಯಾಯಾಲಯಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವುದೇ ತೀರ್ಪು ನೀಡುವಂತಿಲ್ಲ ಎಂದು ಹೇಳಿದೆ.

ಇದನ್ನೂ ಓದಿ : ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ : ಸಾಮಾಜಿಕ ಕಾರ್ಯಕರ್ತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...