Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...