Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...