Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...