Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...