Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...