Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...