Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...