Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...