Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...