Homeಕರ್ನಾಟಕ'ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..'; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ...

‘ಯಾರ ಅನ್ನದ ತಟ್ಟೆಗೂ ಕೈ ಹಾಕಬಾರದು..’; ಕುರುಬ ಸಮುದಾಯದ ಎಸ್‌ಟಿ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಕುರುಬರನ್ನು ಪರಿಶಿಷ್ಟ ಜಾತಿ (ಎಸ್‌ಟಿ) ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ, ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಸರ್ಕಾರ ಕೇಳಿದ್ದು ಅದಷ್ಟೇ ನಮ್ಮೆದುರಿಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, “ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

ಎಸ್‌ಸಿ-ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿಗೆ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಎಸ್‌ಸಿ-ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು” ಎಂದರು.

“ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು; ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್‌ಟಿಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು” ಎಂದರು.

“ಈಗ ಕುರುಬರನ್ನು ಎಸ್‌ಟಿಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಮುಖ್ಯಮಂತ್ರಿಯಾಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಸರ್ಕಾರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ’ ಎಂದು ಸ್ಪಷ್ಟಪಡಿಸಿದರು.

ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

“ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ” ಎಂದು ಸ್ಪಷ್ಟಪಡಿಸಿದರು.

“ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ” ಎಂದರು.

“ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು” ಎಂದು ಕಿವಿಮಾತು ಹೇಳಿದರು.

“ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು” ಎಂದು ಭರವಸೆ ನೀಡಿದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...