Homeಕರ್ನಾಟಕಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

- Advertisement -
- Advertisement -

77ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಬೆಂಗಳೂರಿನ ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಧ್ವಜಾರೋಹಣ ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗ್ಯಾರಂಟಿ ಯೋಜನೆಗಳ ಬಗ್ಗೆ ಭಾಷಣದಲ್ಲಿ ಪ್ರಸ್ತಾಪಸಿದ್ದಾರೆ.ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.

ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕೆ ಹೋರಾಡಿದವರಿಗೆ ನೆನಪಿಸಿಕೊಂಡಿದ್ದಾರೆ.ಸ್ವಾತಂತ್ರ್ಯ ಮನುಷ್ಯನ ಜೀವನಕ್ಕೂ ಮಿಗಿಲು, ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರ ತ್ಯಾಗ, ಬಲಿದಾನ ನೆನೆಯಬೇಕು. ದೇಶದ ಸಂಪತ್ತು ಬಂಡವಾಳ ಶಾಹಿಗಳ ಬಳಿ ಕ್ರೋಡೀಕರಣವಾಗುತ್ತಿದೆ. ನಾವು ಸಂಪತ್ತಿನ ಮರು ಹಂಚಿಕೆ ಮೂಲಕ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದು ಹೇಳಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ ಜಾತಿ, ಧರ್ಮದ ಕಾರಣಕ್ಕೆ ತಾರತಮ್ಯ ದಿಂದ ಜನರು ಸಂಕಷ್ಟದಲ್ಲಿದ್ದರು. ಇದನ್ನು ಸರಕಾರ ಗಂಭೀರವಾಗಿ ಪರಿಗಣಸಿದೆ ಎಂದು ಸಿಎಂ ಭಾಷಣದಲ್ಲಿ ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆ ಬಗ್ಗೆ ಉಲ್ಲೇಖಿಸಿದ ಸಿಎಂ,  ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಶಕ್ತಿಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಬಗ್ಗೆ ರಾಷ್ಟ್ರಿಯ, ಅಂತರಾಷ್ಟ್ರೀಯ ಮಾದ್ಯಮಗಳು ಪ್ರಶಂಸೆ ವ್ಯಕ್ತಪಡಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 2 ಕೋಟಿ ಗ್ರಾಹಕರಿಗೆ ಯೋಜನೆಯ ಸಹಾಯ ಸಿಗಲಿದೆ. ಇದಕ್ಕೆ ವಾರ್ಷಿಕ 13,900,10ಕೋಟಿ ಮೀಸಲಿಟ್ಟಿದ್ದೇವೆ. ಅನ್ನ ಭಾಗ್ಯದ ಮೂಲಕ ಪ್ರತಿ ಫಲಾನುಭವಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯ ನೀಡಲು ಕ್ರಮ ಕೈಗೊಳ್ಳುತ್ತಿದ್ದೇವೆ. ಗೃಹ ಲಕ್ಷ್ಮಿ ಮೂಲಕ ಜನರಿಗೆ 2000ರೂ. ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ. ಯುವ ನಿಧಿ ಮೂಲಕ ಯುವ ಸಮುದಾಯಕ್ಕೆ ಆಸರೆಯಾಗಲಿರುವುದು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು, ಸಾಮಾಜಿಕ ಮಾದ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಅನೈತಿಕ ಪೊಲೀಸ್ ಗಿರಿಯನ್ನು ಸರಕಾರ ಕ್ಷಮಿಸುವುದಿಲ್ಲ. ನಿರೋಧ್ಯೋಗ ನಿವಾರಣೆಗೆ ಸ್ಪಷ್ಟ ಯೋಜನೆ ರೂಪಿಸುತ್ತೇವೆ. ಡ್ರಗ್ಸ್ ವಿರುದ್ಧ ಯುವಜನರಿಗೆ ಸಮಾಲೋಚನೆ ಮಾಡುತ್ತೇವೆ.ವರ್ಷಕ್ಕೆ 50,000 ಕೋಟಿಯನ್ನು ನೇರವಾಗಿ ಜನರಿಗೆ ಗ್ಯಾರೆಂಟಿ  ಯೋಜನೆ ಮೂಲಕ ತಲುಪಿಸಲು ಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಹಿನ್ನೆಲೆ ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ  ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ: 77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...