Homeಕರ್ನಾಟಕಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

- Advertisement -
- Advertisement -

77ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಬೆಂಗಳೂರಿನ ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಧ್ವಜಾರೋಹಣ ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗ್ಯಾರಂಟಿ ಯೋಜನೆಗಳ ಬಗ್ಗೆ ಭಾಷಣದಲ್ಲಿ ಪ್ರಸ್ತಾಪಸಿದ್ದಾರೆ.ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.

ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕೆ ಹೋರಾಡಿದವರಿಗೆ ನೆನಪಿಸಿಕೊಂಡಿದ್ದಾರೆ.ಸ್ವಾತಂತ್ರ್ಯ ಮನುಷ್ಯನ ಜೀವನಕ್ಕೂ ಮಿಗಿಲು, ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರ ತ್ಯಾಗ, ಬಲಿದಾನ ನೆನೆಯಬೇಕು. ದೇಶದ ಸಂಪತ್ತು ಬಂಡವಾಳ ಶಾಹಿಗಳ ಬಳಿ ಕ್ರೋಡೀಕರಣವಾಗುತ್ತಿದೆ. ನಾವು ಸಂಪತ್ತಿನ ಮರು ಹಂಚಿಕೆ ಮೂಲಕ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದು ಹೇಳಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ ಜಾತಿ, ಧರ್ಮದ ಕಾರಣಕ್ಕೆ ತಾರತಮ್ಯ ದಿಂದ ಜನರು ಸಂಕಷ್ಟದಲ್ಲಿದ್ದರು. ಇದನ್ನು ಸರಕಾರ ಗಂಭೀರವಾಗಿ ಪರಿಗಣಸಿದೆ ಎಂದು ಸಿಎಂ ಭಾಷಣದಲ್ಲಿ ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆ ಬಗ್ಗೆ ಉಲ್ಲೇಖಿಸಿದ ಸಿಎಂ,  ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಶಕ್ತಿಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಬಗ್ಗೆ ರಾಷ್ಟ್ರಿಯ, ಅಂತರಾಷ್ಟ್ರೀಯ ಮಾದ್ಯಮಗಳು ಪ್ರಶಂಸೆ ವ್ಯಕ್ತಪಡಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 2 ಕೋಟಿ ಗ್ರಾಹಕರಿಗೆ ಯೋಜನೆಯ ಸಹಾಯ ಸಿಗಲಿದೆ. ಇದಕ್ಕೆ ವಾರ್ಷಿಕ 13,900,10ಕೋಟಿ ಮೀಸಲಿಟ್ಟಿದ್ದೇವೆ. ಅನ್ನ ಭಾಗ್ಯದ ಮೂಲಕ ಪ್ರತಿ ಫಲಾನುಭವಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯ ನೀಡಲು ಕ್ರಮ ಕೈಗೊಳ್ಳುತ್ತಿದ್ದೇವೆ. ಗೃಹ ಲಕ್ಷ್ಮಿ ಮೂಲಕ ಜನರಿಗೆ 2000ರೂ. ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ. ಯುವ ನಿಧಿ ಮೂಲಕ ಯುವ ಸಮುದಾಯಕ್ಕೆ ಆಸರೆಯಾಗಲಿರುವುದು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು, ಸಾಮಾಜಿಕ ಮಾದ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಅನೈತಿಕ ಪೊಲೀಸ್ ಗಿರಿಯನ್ನು ಸರಕಾರ ಕ್ಷಮಿಸುವುದಿಲ್ಲ. ನಿರೋಧ್ಯೋಗ ನಿವಾರಣೆಗೆ ಸ್ಪಷ್ಟ ಯೋಜನೆ ರೂಪಿಸುತ್ತೇವೆ. ಡ್ರಗ್ಸ್ ವಿರುದ್ಧ ಯುವಜನರಿಗೆ ಸಮಾಲೋಚನೆ ಮಾಡುತ್ತೇವೆ.ವರ್ಷಕ್ಕೆ 50,000 ಕೋಟಿಯನ್ನು ನೇರವಾಗಿ ಜನರಿಗೆ ಗ್ಯಾರೆಂಟಿ  ಯೋಜನೆ ಮೂಲಕ ತಲುಪಿಸಲು ಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಹಿನ್ನೆಲೆ ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ  ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ: 77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...