Homeಮುಖಪುಟತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

ತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

- Advertisement -
- Advertisement -

ರಾಜ್ಯಪಾಲರೊಂದಿಗಿನ ಸಂಘರ್ಷದ ನಡುವೆ ರಾಜ್ಯದ ಸ್ವಾಯತ್ತತೆ ಕಾಪಾಡಲು ಕ್ರಮ ಕೈಗೊಳ್ಳುವ ಸಲುವಾಗಿ ಶಿಫಾರಸ್ಸುಗಳನ್ನು ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕೇಂದ್ರ ಸರ್ಕಾರದೊಂದಿಗಿನ ಸಂಬಂಧಗಳನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲಿದೆ.

ರಾಜ್ಯ ಸರ್ಕಾರಗಳಿಗೆ ಬಿಡಲಾಗಿದ್ದ, ಈಗ ರಾಜ್ಯ ಮತ್ತು ಕೇಂದ್ರವು ಜಂಟಿಯಾಗಿ ನಿರ್ವಹಿಸುತ್ತಿರುವ ಆಡಳಿತ ಮತ್ತು ನೀತಿ ನಿರೂಪಣೆಯ ಕ್ಷೇತ್ರಗಳನ್ನು ಮರಳಿ ತರುವುದು, ಅಂದರೆ, ಸಮಕಾಲೀನ ಪಟ್ಟಿಗೆ ಸ್ಥಳಾಂತರಗೊಂಡ ರಾಜ್ಯ ವಿಷಯಗಳನ್ನು ಮರುಪಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯವನ್ನೂ ಸಮಿತಿಗೆ ವಹಿಸಲಾಗಿದೆ.

ಮಾಜಿ ಅಧಿಕಾರಿಗಳಾದ ಅಶೋಕ್ ಶೆಟ್ಟಿ ಮತ್ತು ಮು ನಾಗರಾಜನ್ ಅವರನ್ನು ಒಳಗೊಂಡ ಸಮಿತಿಯು, ಭಾರತವನ್ನು ರೂಪಿಸುವ ರಾಜ್ಯಗಳ ಒಕ್ಕೂಟದ ಸಮಗ್ರತೆಗೆ ಧಕ್ಕೆಯಾಗದಂತೆ ಕಾನೂನುಗಳನ್ನು ನಿರ್ಣಯಿಸುವ ಮತ್ತು ಮೌಲ್ಯಮಾಪನ ಮಾಡುವ ನಿರೀಕ್ಷೆಯಿದೆ.

ಜನವರಿ 2026ರೊಳಗೆ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, 2028ರ ವೇಳೆಗೆ ಅಂತಿಮ ವರದಿ ಸಲ್ಲಿಕೆಯಾಗಲಿದೆ. ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸ್ಟಾಲಿನ್ ವಿಧಾನಸಭೆಗೆ ತಿಳಿಸಿದ್ದಾರೆ.

ರಾಜ್ಯಪಾಲರೊಂದಿಗಿನ ಸಂಘರ್ಷ, ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ವಿವಾದಾತ್ಮಕ ಮತ್ತು ಕೇಂದ್ರೀಯವಾಗಿ ನಡೆಸಲ್ಪಡುವ ನೀಟ್ ಪರೀಕ್ಷೆಯಿಂದ ವಿನಾಯಿತಿ ಪಡೆಯುವ ರಾಜ್ಯ ಸರ್ಕಾರದ ಒತ್ತಾಯ ಸೇರಿದಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ತೀವ್ರ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ಸ್ಟಾಲಿನ್ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಅಂಗೀಕರಿಸಿದ 10 ಮಸೂದೆಗಳ ಕುರಿತು ಯಾವುದೇ ನಿರ್ಣಯ ತೆಗೆದುಕೊಳ್ಳದೆ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಕಳೆದ ವಾರ ತರಾಟೆಗೆ ತೆಗೆದುಕೊಂಡಿತ್ತು. 10 ಮಸೂದೆಗಳು ಅಂಗೀಕಾರಗೊಂಡಿದೆ ಎಂದು ಘೋಷಿಸಿ ಸರ್ಕಾರದ ಪರ ತೀರ್ಪು ನೀಡಿತ್ತು. ರಾಜ್ಯಪಾಲ ರವಿ ಅವರ ನಡವಳಿಕೆ ‘ನಿರಂಕುಶ’ ಮತ್ತು ‘ಸಂವಿಧಾನಬಾಹಿರ’ ಎಂದಿತ್ತು.

ಕೇಂದ್ರ ಸರ್ಕಾರ ನೇಮಿಸಿದ ರಾಜ್ಯಪಾಲರು ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಪದೇ ಪದೇ ಆರೋಪ ಮಾಡುತ್ತಿತ್ತು. ಈ ವೇಳೆ ಸುಪ್ರೀಂ ಕೋರ್ಟ್‌ ಸರ್ಕಾರದ ಪರ ತೀರ್ಪು ನೀಡಿದ್ದನ್ನು ಸಿಎಂ ಸ್ಟಾಲಿನ್ ಐತಿಹಾಸಿಕ ಎಂದಿದ್ದರು.

ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ, ಅಂದರೆ ಇದನ್ನು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ವಹಿಸುತ್ತಿವೆ. ಆದರೆ, ತಮಿಳುನಾಡು ಸಿಎಂ ಸ್ಟಾಲಿನ್ ಅವರು ಇದು ಕೇವಲ ರಾಜ್ಯದ ವಿಷಯವಾಗಿರಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಬದಲಾಯಿಸಿದ ಸಂವಿಧಾನದ 42ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನೀಟ್‌ಗೆ ಬದಲಾಗಿ 12ನೇ ತರಗತಿಯ ಅಂಕಗಳನ್ನು ಪರಿಗಣಿಸಬೇಕೆಂದು ತಮಿಳುನಾಡು ವಿಧಾನಸಭೆ ಎರಡು ಬಾರಿ ಅಂಗೀಕರಿಸಿದ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ ನಂತರ, ಕೇಂದ್ರ ಮತ್ತು ರಾಜ್ಯದ ನಡುವೆ ಸಂಘರ್ಷ ಏರ್ಪಟ್ಟಿತ್ತು.

“ಕೇಂದ್ರ ಸರ್ಕಾರ ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿರಬಹುದು… ಆದರೆ ನಮ್ಮ ಹೋರಾಟ ಇನ್ನೂ ಕೊನೆಗೊಂಡಿಲ್ಲ.ಈ ನಿರ್ಧಾರವನ್ನು ಹೇಗೆ ಪ್ರಶ್ನಿಸುವುದು ಎಂಬುದರ ಕುರಿತು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಮತ್ತೊಂದು ಪ್ರಮುಖ ವಿವಾದವೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ತ್ರಿಭಾಷಾ ಸೂತ್ರ, ಇದನ್ನು ‘ಹಿಂದಿ ಹೇರಿಕೆ’ ಎಂದು ತಮಿಳುನಾಡು ಕಠುವಾಗಿ ವಿರೋಧಿಸಿದೆ.

ಹರಿಯಾಣ ಭೂ ವ್ಯವಹಾರ ಪ್ರಕರಣ; ರಾಬರ್ಟ್ ವಾದ್ರಾಗೆ ಎರಡನೇ ಸಮನ್ಸ್ ಕೊಟ್ಟ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...