Homeಮುಖಪುಟತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

ತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

- Advertisement -
- Advertisement -

ರಾಜ್ಯಪಾಲರೊಂದಿಗಿನ ಸಂಘರ್ಷದ ನಡುವೆ ರಾಜ್ಯದ ಸ್ವಾಯತ್ತತೆ ಕಾಪಾಡಲು ಕ್ರಮ ಕೈಗೊಳ್ಳುವ ಸಲುವಾಗಿ ಶಿಫಾರಸ್ಸುಗಳನ್ನು ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕೇಂದ್ರ ಸರ್ಕಾರದೊಂದಿಗಿನ ಸಂಬಂಧಗಳನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲಿದೆ.

ರಾಜ್ಯ ಸರ್ಕಾರಗಳಿಗೆ ಬಿಡಲಾಗಿದ್ದ, ಈಗ ರಾಜ್ಯ ಮತ್ತು ಕೇಂದ್ರವು ಜಂಟಿಯಾಗಿ ನಿರ್ವಹಿಸುತ್ತಿರುವ ಆಡಳಿತ ಮತ್ತು ನೀತಿ ನಿರೂಪಣೆಯ ಕ್ಷೇತ್ರಗಳನ್ನು ಮರಳಿ ತರುವುದು, ಅಂದರೆ, ಸಮಕಾಲೀನ ಪಟ್ಟಿಗೆ ಸ್ಥಳಾಂತರಗೊಂಡ ರಾಜ್ಯ ವಿಷಯಗಳನ್ನು ಮರುಪಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯವನ್ನೂ ಸಮಿತಿಗೆ ವಹಿಸಲಾಗಿದೆ.

ಮಾಜಿ ಅಧಿಕಾರಿಗಳಾದ ಅಶೋಕ್ ಶೆಟ್ಟಿ ಮತ್ತು ಮು ನಾಗರಾಜನ್ ಅವರನ್ನು ಒಳಗೊಂಡ ಸಮಿತಿಯು, ಭಾರತವನ್ನು ರೂಪಿಸುವ ರಾಜ್ಯಗಳ ಒಕ್ಕೂಟದ ಸಮಗ್ರತೆಗೆ ಧಕ್ಕೆಯಾಗದಂತೆ ಕಾನೂನುಗಳನ್ನು ನಿರ್ಣಯಿಸುವ ಮತ್ತು ಮೌಲ್ಯಮಾಪನ ಮಾಡುವ ನಿರೀಕ್ಷೆಯಿದೆ.

ಜನವರಿ 2026ರೊಳಗೆ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, 2028ರ ವೇಳೆಗೆ ಅಂತಿಮ ವರದಿ ಸಲ್ಲಿಕೆಯಾಗಲಿದೆ. ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸ್ಟಾಲಿನ್ ವಿಧಾನಸಭೆಗೆ ತಿಳಿಸಿದ್ದಾರೆ.

ರಾಜ್ಯಪಾಲರೊಂದಿಗಿನ ಸಂಘರ್ಷ, ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ವಿವಾದಾತ್ಮಕ ಮತ್ತು ಕೇಂದ್ರೀಯವಾಗಿ ನಡೆಸಲ್ಪಡುವ ನೀಟ್ ಪರೀಕ್ಷೆಯಿಂದ ವಿನಾಯಿತಿ ಪಡೆಯುವ ರಾಜ್ಯ ಸರ್ಕಾರದ ಒತ್ತಾಯ ಸೇರಿದಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ತೀವ್ರ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ಸ್ಟಾಲಿನ್ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಅಂಗೀಕರಿಸಿದ 10 ಮಸೂದೆಗಳ ಕುರಿತು ಯಾವುದೇ ನಿರ್ಣಯ ತೆಗೆದುಕೊಳ್ಳದೆ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಕಳೆದ ವಾರ ತರಾಟೆಗೆ ತೆಗೆದುಕೊಂಡಿತ್ತು. 10 ಮಸೂದೆಗಳು ಅಂಗೀಕಾರಗೊಂಡಿದೆ ಎಂದು ಘೋಷಿಸಿ ಸರ್ಕಾರದ ಪರ ತೀರ್ಪು ನೀಡಿತ್ತು. ರಾಜ್ಯಪಾಲ ರವಿ ಅವರ ನಡವಳಿಕೆ ‘ನಿರಂಕುಶ’ ಮತ್ತು ‘ಸಂವಿಧಾನಬಾಹಿರ’ ಎಂದಿತ್ತು.

ಕೇಂದ್ರ ಸರ್ಕಾರ ನೇಮಿಸಿದ ರಾಜ್ಯಪಾಲರು ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಪದೇ ಪದೇ ಆರೋಪ ಮಾಡುತ್ತಿತ್ತು. ಈ ವೇಳೆ ಸುಪ್ರೀಂ ಕೋರ್ಟ್‌ ಸರ್ಕಾರದ ಪರ ತೀರ್ಪು ನೀಡಿದ್ದನ್ನು ಸಿಎಂ ಸ್ಟಾಲಿನ್ ಐತಿಹಾಸಿಕ ಎಂದಿದ್ದರು.

ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ, ಅಂದರೆ ಇದನ್ನು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ವಹಿಸುತ್ತಿವೆ. ಆದರೆ, ತಮಿಳುನಾಡು ಸಿಎಂ ಸ್ಟಾಲಿನ್ ಅವರು ಇದು ಕೇವಲ ರಾಜ್ಯದ ವಿಷಯವಾಗಿರಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಬದಲಾಯಿಸಿದ ಸಂವಿಧಾನದ 42ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನೀಟ್‌ಗೆ ಬದಲಾಗಿ 12ನೇ ತರಗತಿಯ ಅಂಕಗಳನ್ನು ಪರಿಗಣಿಸಬೇಕೆಂದು ತಮಿಳುನಾಡು ವಿಧಾನಸಭೆ ಎರಡು ಬಾರಿ ಅಂಗೀಕರಿಸಿದ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ ನಂತರ, ಕೇಂದ್ರ ಮತ್ತು ರಾಜ್ಯದ ನಡುವೆ ಸಂಘರ್ಷ ಏರ್ಪಟ್ಟಿತ್ತು.

“ಕೇಂದ್ರ ಸರ್ಕಾರ ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿರಬಹುದು… ಆದರೆ ನಮ್ಮ ಹೋರಾಟ ಇನ್ನೂ ಕೊನೆಗೊಂಡಿಲ್ಲ.ಈ ನಿರ್ಧಾರವನ್ನು ಹೇಗೆ ಪ್ರಶ್ನಿಸುವುದು ಎಂಬುದರ ಕುರಿತು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಮತ್ತೊಂದು ಪ್ರಮುಖ ವಿವಾದವೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ತ್ರಿಭಾಷಾ ಸೂತ್ರ, ಇದನ್ನು ‘ಹಿಂದಿ ಹೇರಿಕೆ’ ಎಂದು ತಮಿಳುನಾಡು ಕಠುವಾಗಿ ವಿರೋಧಿಸಿದೆ.

ಹರಿಯಾಣ ಭೂ ವ್ಯವಹಾರ ಪ್ರಕರಣ; ರಾಬರ್ಟ್ ವಾದ್ರಾಗೆ ಎರಡನೇ ಸಮನ್ಸ್ ಕೊಟ್ಟ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...