Homeಮುಖಪುಟತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

ತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

- Advertisement -
- Advertisement -

ರಾಜ್ಯಪಾಲರೊಂದಿಗಿನ ಸಂಘರ್ಷದ ನಡುವೆ ರಾಜ್ಯದ ಸ್ವಾಯತ್ತತೆ ಕಾಪಾಡಲು ಕ್ರಮ ಕೈಗೊಳ್ಳುವ ಸಲುವಾಗಿ ಶಿಫಾರಸ್ಸುಗಳನ್ನು ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಕೇಂದ್ರ ಸರ್ಕಾರದೊಂದಿಗಿನ ಸಂಬಂಧಗಳನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲಿದೆ.

ರಾಜ್ಯ ಸರ್ಕಾರಗಳಿಗೆ ಬಿಡಲಾಗಿದ್ದ, ಈಗ ರಾಜ್ಯ ಮತ್ತು ಕೇಂದ್ರವು ಜಂಟಿಯಾಗಿ ನಿರ್ವಹಿಸುತ್ತಿರುವ ಆಡಳಿತ ಮತ್ತು ನೀತಿ ನಿರೂಪಣೆಯ ಕ್ಷೇತ್ರಗಳನ್ನು ಮರಳಿ ತರುವುದು, ಅಂದರೆ, ಸಮಕಾಲೀನ ಪಟ್ಟಿಗೆ ಸ್ಥಳಾಂತರಗೊಂಡ ರಾಜ್ಯ ವಿಷಯಗಳನ್ನು ಮರುಪಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ಶಿಫಾರಸ್ಸು ಮಾಡುವ ಕಾರ್ಯವನ್ನೂ ಸಮಿತಿಗೆ ವಹಿಸಲಾಗಿದೆ.

ಮಾಜಿ ಅಧಿಕಾರಿಗಳಾದ ಅಶೋಕ್ ಶೆಟ್ಟಿ ಮತ್ತು ಮು ನಾಗರಾಜನ್ ಅವರನ್ನು ಒಳಗೊಂಡ ಸಮಿತಿಯು, ಭಾರತವನ್ನು ರೂಪಿಸುವ ರಾಜ್ಯಗಳ ಒಕ್ಕೂಟದ ಸಮಗ್ರತೆಗೆ ಧಕ್ಕೆಯಾಗದಂತೆ ಕಾನೂನುಗಳನ್ನು ನಿರ್ಣಯಿಸುವ ಮತ್ತು ಮೌಲ್ಯಮಾಪನ ಮಾಡುವ ನಿರೀಕ್ಷೆಯಿದೆ.

ಜನವರಿ 2026ರೊಳಗೆ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, 2028ರ ವೇಳೆಗೆ ಅಂತಿಮ ವರದಿ ಸಲ್ಲಿಕೆಯಾಗಲಿದೆ. ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸ್ಟಾಲಿನ್ ವಿಧಾನಸಭೆಗೆ ತಿಳಿಸಿದ್ದಾರೆ.

ರಾಜ್ಯಪಾಲರೊಂದಿಗಿನ ಸಂಘರ್ಷ, ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ವಿವಾದಾತ್ಮಕ ಮತ್ತು ಕೇಂದ್ರೀಯವಾಗಿ ನಡೆಸಲ್ಪಡುವ ನೀಟ್ ಪರೀಕ್ಷೆಯಿಂದ ವಿನಾಯಿತಿ ಪಡೆಯುವ ರಾಜ್ಯ ಸರ್ಕಾರದ ಒತ್ತಾಯ ಸೇರಿದಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ತೀವ್ರ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ಸ್ಟಾಲಿನ್ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಅಂಗೀಕರಿಸಿದ 10 ಮಸೂದೆಗಳ ಕುರಿತು ಯಾವುದೇ ನಿರ್ಣಯ ತೆಗೆದುಕೊಳ್ಳದೆ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಕಳೆದ ವಾರ ತರಾಟೆಗೆ ತೆಗೆದುಕೊಂಡಿತ್ತು. 10 ಮಸೂದೆಗಳು ಅಂಗೀಕಾರಗೊಂಡಿದೆ ಎಂದು ಘೋಷಿಸಿ ಸರ್ಕಾರದ ಪರ ತೀರ್ಪು ನೀಡಿತ್ತು. ರಾಜ್ಯಪಾಲ ರವಿ ಅವರ ನಡವಳಿಕೆ ‘ನಿರಂಕುಶ’ ಮತ್ತು ‘ಸಂವಿಧಾನಬಾಹಿರ’ ಎಂದಿತ್ತು.

ಕೇಂದ್ರ ಸರ್ಕಾರ ನೇಮಿಸಿದ ರಾಜ್ಯಪಾಲರು ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಪದೇ ಪದೇ ಆರೋಪ ಮಾಡುತ್ತಿತ್ತು. ಈ ವೇಳೆ ಸುಪ್ರೀಂ ಕೋರ್ಟ್‌ ಸರ್ಕಾರದ ಪರ ತೀರ್ಪು ನೀಡಿದ್ದನ್ನು ಸಿಎಂ ಸ್ಟಾಲಿನ್ ಐತಿಹಾಸಿಕ ಎಂದಿದ್ದರು.

ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ, ಅಂದರೆ ಇದನ್ನು ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ವಹಿಸುತ್ತಿವೆ. ಆದರೆ, ತಮಿಳುನಾಡು ಸಿಎಂ ಸ್ಟಾಲಿನ್ ಅವರು ಇದು ಕೇವಲ ರಾಜ್ಯದ ವಿಷಯವಾಗಿರಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಬದಲಾಯಿಸಿದ ಸಂವಿಧಾನದ 42ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನೀಟ್‌ಗೆ ಬದಲಾಗಿ 12ನೇ ತರಗತಿಯ ಅಂಕಗಳನ್ನು ಪರಿಗಣಿಸಬೇಕೆಂದು ತಮಿಳುನಾಡು ವಿಧಾನಸಭೆ ಎರಡು ಬಾರಿ ಅಂಗೀಕರಿಸಿದ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ ನಂತರ, ಕೇಂದ್ರ ಮತ್ತು ರಾಜ್ಯದ ನಡುವೆ ಸಂಘರ್ಷ ಏರ್ಪಟ್ಟಿತ್ತು.

“ಕೇಂದ್ರ ಸರ್ಕಾರ ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿರಬಹುದು… ಆದರೆ ನಮ್ಮ ಹೋರಾಟ ಇನ್ನೂ ಕೊನೆಗೊಂಡಿಲ್ಲ.ಈ ನಿರ್ಧಾರವನ್ನು ಹೇಗೆ ಪ್ರಶ್ನಿಸುವುದು ಎಂಬುದರ ಕುರಿತು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಮತ್ತೊಂದು ಪ್ರಮುಖ ವಿವಾದವೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ತ್ರಿಭಾಷಾ ಸೂತ್ರ, ಇದನ್ನು ‘ಹಿಂದಿ ಹೇರಿಕೆ’ ಎಂದು ತಮಿಳುನಾಡು ಕಠುವಾಗಿ ವಿರೋಧಿಸಿದೆ.

ಹರಿಯಾಣ ಭೂ ವ್ಯವಹಾರ ಪ್ರಕರಣ; ರಾಬರ್ಟ್ ವಾದ್ರಾಗೆ ಎರಡನೇ ಸಮನ್ಸ್ ಕೊಟ್ಟ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...