Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...