Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...