Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...