Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...