Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...