Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....