Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...