Homeಕರ್ನಾಟಕ1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್...

1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

- Advertisement -
- Advertisement -

ಹೋದ ವರ್ಷ ಏಪ್ರಿಲ್ 29ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಂದು ಪತ್ರ, ಇತ್ತೀಚೆಗೆ ಏಪ್ರಿಲ್ 14ರಂದು ಒಂದು ಪತ್ರ. ಈ ಎರಡರ ನಡುವೆ ಇನ್ನೂ ಎಂಟು ಪತ್ರಗಳು. ಹಲವು ಟ್ವೀಟ್‌ಗಳು, ಏಳು ಪ್ರೆಸ್‌ಮೀಟ್‌ಗಳು, ಒಮ್ಮೆ ಆರೋಗ್ಯ ಸಚಿವ ಡಾ, ಸುಧಾಕರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯಲ್ಲಿ ಮನವಿ ಮತ್ತು ಅಧಿವೇಶನದಲ್ಲಿ ಆಗ್ರಹ…..

ಇಷ್ಟೆಲ್ಲವನ್ನೂ ಗದಗ ಶಾಸಕ ಎಚ್.ಕೆ.ಪಾಟೀಲರು ಕೋವಿಡ್ ನಿಯಂತ್ರಣಕ್ಕಾಗಿ, ಕೋವಿಡ್ ಸಾವು ತಪ್ಪಿಸಲು ಅನುಸರಿಸಬೇಕಾದ ಕ್ರಮಗಳಿಗಾಗಿ ಸರ್ಕಾರವನ್ನು ಆಗ್ರಹಿಸಲು ಮಾಡುತ್ತ ಬಂದರು.

8 ತಿಂಗಳ ಹಿಂದೆಯೇ ಅವರು, ಮುಂದೆ ಸಂಭವಿಸಲಿರುವ ಆಮ್ಲಜನಕ ಕೊರತೆ, ವೆಂಟಿಲೇಟರ್ ಕೊರತೆ ಮತ್ತು ಆಸ್ಪತ್ರೆ ಹಾಸಿಗೆಗಳ ಕುರಿತು ಎಚ್ಚರಿಸುತ್ತ ಬಂದರು. ಮೊದಲ ಪತ್ರದಲ್ಲಿ (ಹೋದ ವರ್ಷ ಏಪ್ರಿಲ್) ಈ ಸಂದರ್ಭ ಬಳಸಿಕೊಂಡು ಮದ್ಯಪಾನ ನಿಷೇಧಕ್ಕೆ ಯತ್ನಿಸಿ ಎಮದು ಸಲಹೆ ಕೊಟ್ಟಿದ್ದರು.

ಉಳಿದ ಪತ್ರಗಳಲ್ಲಿ ಕೈಗಾರಿಕಾ ವಲಯದ ಆಮ್ಜನಕ ಬಳಸಿಕೊಳ್ಳಲು, ಖಾಸಗಿ ಆಸ್ಪತ್ರೆಗಳು ಕನಿಷ್ಠ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಒತ್ತಾಯ ಹಾಕುತ್ತ ಬಂದರು.
ಆದರೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಎಚ್.ಕೆ ಪಾಟೀಲರ ಸಲಹೆಗಳಿಗೆ ಗೋಣು ಆಡಿಸಿದರೇ ವಿನಃ ಕ್ರಮಕ್ಕೆ ಮುಂದಾಗಲಿಲ್ಲ. ಅದರ ಪರಿಣಾಮವನ್ನು ಇವತ್ತು ನೋಡುತ್ತಿದ್ದೇವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಎಚ್‌ಕೆ. ಪಾಟೀಲ್, ‘ಹತ್ತಾರು ಪತ್ರ ಬರೆದು ಸರ್ಕಾರದ ಜವಾಬ್ದಾರಿ ನೆನಪಿಸಿದೆ, ಸುದ್ದಿಗೋಷ್ಠಿಗಳ ಮೂಲಕ, ಟ್ವೀಟ್‌ಗಳ ಮೂಲಕ ವಿನಂತಿಸಿದೆ. ನೇರವಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿಗೇ ಹೋಗಿ ಆಮ್ಲಜನಕವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಿ ಬಂದೆ. ಅಧಿವೇಶನದಲ್ಲೂ ಆರೋಗ್ಯ ಮೂಲ ಸೌಕರ್ಯಗಳನ್ನು ಬೇಗ ಉನ್ನತಿಕರಿಸಿ ಎಂದು ಒತ್ತಾಯಿಸಿದೆ. ತಜ್ಞರ ಮಾತನ್ನೇ ಆಲಿಸದ ಈ ಸರ್ಕಾರ ವಿರೋಧ ಪಕ್ಷದವರ ಸಲಹೆಯನ್ನು ಕೇಳುತ್ತದೆಯೇ? ಕೈಗಾರಿಕೆಗಳ ಪರ ಇರುವ ಈ ಸರ್ಕಾರ, ಕೇಂದ್ರ ಸರ್ಕಾರದಂತೆ ಉದ್ಯಮಿಗಳ ಪರ ಇದೆಯೇ ಹೊರತು ಜನಸಾಮಾನ್ಯನ ಪರ ಇಲ್ಲ. ಇವತ್ತು ಎರಡನೇ ಕೋವಿಡ್ ಅಲೆ ರಾಜ್ಯದಲ್ಲಿ ತೀವ್ರಗೊಳ್ಳಲು ಈ ಸರ್ಕಾರದ ಸೋಮಾರಿತನ, ಅದಕ್ಷತೆಯೇ ಕಾರಣ’ ಎಂದರು.

‘ಕಳೆದ ಮಂಗಳವಾರ, ಬುಧವಾರ ದೆಹಲಿ ಹೈಕೋರ್ಟ್ ಆಮ್ಲಜನಕ ಕುರಿತಾಗಿ ಏನು ಹೇಳಿತೋ ಅದನ್ನು ನಾನು ಕಳೆದ ವರ್ಷದಿಂದ ಹೇಳುತ್ತ ಬಂದಿದ್ದೇನೆ. ಕೋರ್ಟ್ ಆಕ್ರೋಶದಲ್ಲಿ ಹೇಳಿದ್ದನ್ನು ನಾನು ಸೌಮ್ಯವಾಗಿ ಸಲಹೆ ರೂಪದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತ ಬಂದಿದ್ದೇನೆ. ಆದರೆ, ದಪ್ಪ ಚರ್ಮದ ರಾಜ್ಯ ಸರ್ಕಾರಕ್ಕೆ. ಮಂತ್ರಿಮಂಡಲಕ್ಕೆ ಆಪರೇಷನ್ ಕಮಲದಿಂದ ಬಂದವರನ್ನು ಸೇರಿಸಿಕೊಳ್ಳುವುದು, ಉಪ ಚುನಾವಣೆ ಮುಖ್ಯವಾಯಿತೆ ಹೊರತು ಕೋವಿಡ್ ನಿಯಂತ್ರಣದ ಕಾಳಜಿ ಮುಖ್ಯವಾಗಲೇ ಇಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

‘ಈಗಲಾದರೂ ಕೈಗಾರಿಕಾ ವಲಯದ ಆಮ್ಲಜನಕವನ್ನು ಪಡೆಯಬೇಕು. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅದನ್ನು ವಶಪಡಿಸಿಕೊಳ್ಳಬೇಕು. ಕೈಗಾರಿಕಾ ಉದ್ದೇಶದ ಆಮ್ಲಜನಕ, ವೈದ್ಯಕೀಯ ಆಮ್ಲಜನಕ ವ್ಯತ್ಯಾಸವೇನಿಲ್ಲ. ಒಂದು ದೊಡ್ಡ ಗಾತ್ರದ ಸಿಲಿಂಡರ್‌ನಲ್ಲಿ ಇರುತ್ತದೆ, ಇನ್ನೊಂದು ಸಣ್ಣ ಸೈಜಿನ ಸಿಲಿಂಡರ್‌ನಲ್ಲಿ ಇರುತ್ತದೆ. ಈಗ ಹೇಗೂ ಬಹುಪಾಲು ಆಸ್ಪತ್ರೆಗಳಲ್ಲಿ ಎಲ್ಲ ವಾರ್ಡು, ರೂಮ್‌ಗಳಿಗೆ ಆಕ್ಸಿಜನ್ ಪೈಪಿಂಗ್ ಇದೆ. ಕೈಗಾರಿಕಾ ಸಿಲಿಂಡರ್‌ಗಳನ್ನು ಈ ಪೈಪಿಂಗ್‌ಗೆ ಜೋಡಿಸುವುದಷ್ಟೇ ಕೆಲಸ. ಆದರೆ ಸರ್ಕಾರ ಇನ್ನೂ ಮಾತುಕತೆಯ ಹಂತದಲ್ಲಿದೆ… ಎಷ್ಟೊಂದು ಜೀವಗಳು ಬಲಿಯಾಗಬೇಕು?’ ಎಂದು ಅವರು ಪ್ರಶ್ನೆ ಮಾಡುತ್ತಲೇ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಶಾಸಕರೊಬ್ಬರ ಸಲಹೆಯನ್ನೂ ಪರಿಗಣಿಸದ, ತಜ್ಞರ ಎಚ್ಚರಿಕೆಯನ್ನೂ ಗೌರವಿಸದ ಯಡಿಯೂರಪ್ಪ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಸರ್ಕಾರದ ಆಡಳಿತ ರಾಜ್ಯ‘ಪಾಲ’ನ್ನು ವರ್ಗಾಯಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...