Homeಕರ್ನಾಟಕಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಹೈದರಾಬಾದ್ ಕರ್ನಾಟಕದಲ್ಲಿ ಕೀಳು ರಾಜಕೀಯ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಅನರ್ಹರಿಗೆ ವಿವೇಚನಾಹೀನ ನಿಧಿ ನೀಡಿದ್ದು ಬಿಜೆಪಿಯೇತರ ಶಾಸಕರಿಗೆ ದುರ್ವಿಧಿ ಘೋಷಿಸಿದ್ದಾರೆ.

- Advertisement -
- Advertisement -

ಪ್ರವಾಹಪೀಡಿತ ಪ್ರದೇಶಗಳಿಗೆ ಅನುದಾನ ಕೊಡುವುದಿರಲಿ, 10 ಸಾವಿರ ಕೊಟ್ಟದ್ದೇ ಹೆಚ್ಚು ಎಂದು ಸಂತ್ರಸ್ತ ಕುಟುಂಬಗಳನ್ನು ಸಚಿವ ಕೆ.ಎಸ್. ಈಶ್ವರಪ್ಪ ಅವಮಾನಿಸಿ ಹೋಗಿದ್ದಾರೆ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶಿಕಾರಿಪುರ ತಾಲೂಕಿಗೆ ಏಕಾಏಕಿ 1,100 ಕೋಟಿ ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ, ಉಳಿದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 3 ಕೋಟಿ ಅನುದಾನವನ್ನು ನೀಡಿರುವ ಯಡಿಯೂರಪ್ಪ, 23 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನಯಾಪೈಸೆಯನ್ನೂ ನೀಡಿಲ್ಲ. ಅಸಹ್ಯ ಆಡಳಿತ ಮತ್ತು ಸ್ವಾರ್ಥ ರಾಜಕಾರಣಕ್ಕೆ ಇದಕ್ಕಿಂತ ಉದಾಹರಣೆ ಬೇಕೇ?

ನೆರೆಪೀಡಿತ ಪ್ರದೇಶಗಳಿಗೂ ಚಿಕ್ಕಾಸೂ ಬಿಡುಗಡೆ ಮಾಡಲು ಒಲ್ಲದ ದೇಶದ ಪ್ರಧಾನಿ ಚಂದಮಾಮಾನನ್ನು ತೋರಿಸಲು ಬೆಂಗಳೂರಿಗೆ ಬಂದು ಕರ್ನಾಟಕದ ಸಂಕಟಗಳಿಗೆ ಬೆನ್ನು ಮಾಡಿ ಹೋಗುತ್ತಾರೆ. ಇತ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ‘ನಿಮ್ಗೆಲ್ಲ 10 ಸಾವಿರ ಪರಿಹಾರ ಕೊಟ್ಟಿದ್ದೇ ಜಾಸ್ತಿ ಹೋಗ್ರಿ’ ಎಂದು ಉದ್ಧಟತನದ ಮಾತಾಡಿ ಜನರ ಆಕ್ರೋಶಕ್ಕೆ ಗುರುಯಾಗಿದ್ದಾರೆ. ಅವರ ಕಾರಿಗೆ ಮುತ್ತಿಗೆ ಹಾಕಿದ ಜನ ಕಾರನ್ನು ಗುದ್ದಿ ಗುದ್ದಿ ತಮ್ಮ ಅಸಹನೆ ವ್ಯಕ್ತಪಡಿಸಿದ್ದಾರೆ.

ಅದಕ್ಕಿಂತ ಹೀನ ಕೆಲಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುವ ಮೂಲಕ ಹೈದರಾಬಾದ್-ಕರ್ನಾಟಕದ ಜನರ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ. ಪ್ರವಾಹ, ನೆರೆ ಮತ್ತು ಬರ ಇದ್ಯಾವುದರ ಬಗ್ಗೆಯೂ ನಮಗೆ ಚಿಂತೆಯಿಲ್ಲ, ನಮಗೀಗ ಉಪ ಚುನಾವಣೆಗಳನ್ನು ಗೆಲ್ಲಬೇಕು ಮತ್ತು ಹೈಮಾಂಡ್ ಹೇಳಿದ್ದನ್ನು ಎಲ್ಲ ಮುಚ್ಚಿಕೊಂಡು ಪಾಲಿಸಬೇಕು ಎಂಬ ಸಂದೇಶವನ್ನು ಸಿಎಂ ಯಡಿಯೂರಪ್ಪ ತಮ್ಮ ಅಪ್ರಬುದ್ಧ, ಅಸಂಬದ್ಧ ಆದೇಶಗಳ ಮೂಲಕ ಜಗಜ್ಜಾಹೀರು ಮಾಡಿದ್ದಾರೆ.

ನೆರೆಪೀಡಿತರಿಗೆ ನಕೋ, ಅನರ್ಹರಿಗೆ ಪೀಕೋ ಪೀಕು
ಒಂದು ಕಡೆ ನೆರೆಪ್ರವಾಹದಿಂದ, ಇನ್ನೊಂದು ಕಡೆ ಪ್ರವಾಹದಿಂದ ಉತ್ತರ ಕರ್ನಾಟಕದ ಬಹುಭಾಗ ಮತ್ತು ದಕ್ಷಿಣ ಕರ್ನಾಟಕದ ಕೆಲ ಭಾಗಗಳಲ್ಲಿ ಜೀವನ ಅಸ್ತವ್ಯಸ್ತವಾಗಿದೆ, ಬೆಳೆಗಳು (ಪೀಕು) ನಾಶವಾಗಿವೆ. ಆದರೆ, ಅನರ್ಹ ಶಾಸಕರಿಗೆ ಮಾತ್ರ ಪೀಕೋ ಪೀಕು. ಸರ್ಕಾರ ಉರುಳಿಸಲು ಸಾಕಷ್ಟು ‘ಪೀಕಿದ’ ಈ ಅನರ್ಹರಿಗೆ ಈ ಸಚಿವ ಸ್ಥಾನ ಕೊಡಲಂತೂ ಆಗುವುದಿಲ್ಲ. ಆದರೆ, ಐದು ತಿಂಗಳಿಗೇ ಬರಲಿರುವ 17 ಉಪ ಚುನಾವಣೆಗಳಲ್ಲಿ ಕನಿಷ್ಠ 10ರಲ್ಲಾದರೂ ಗೆಲ್ಲಲೇಬೇಕು.

ಹೀಗಾಗಿ ಯಡಿಯೂರಪ್ಪ ಸರ್ಕಾರ ಈಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಅನುದಾನ ಕೊಡಲು ಪ್ಲಾನು ಮಾಡಿದೆ. ಅದರ ಮೊದಲ ಭಾಗವಾಗಿ ಈಗ ಹೈದರಾಬಾದ್-ಕರ್ನಾಟಕದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದಾರೆ ಯಡಿಯೂರಪ್ಪ. ವಿಜಯನಗರ-ಹೊಸಪೇಟೆ (ಆನಂದಸಿಂಗ್-ಅನರ್ಹ) ಮತ್ತು ಮಸ್ಕಿ (ಪ್ರತಾಪಗೌಡ- ಅನರ್ಹ) ಈ ಇಬ್ಬರಿಗೂ ಬೋನಸ್ ನೀಡುವ ಮೂಲಕ ಬರಲಿರುವ ಉಪಚುನಾವಣೆಗಳ ಮೇಲೆ ಯಡಿಯೂರಪ್ಪ ಕಣ್ಣು ಹಾಕಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಝೀರೊ!
ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಈ ಬಜೆಟ್ಟಿನಲ್ಲಿ (ಕುಮಾರಸ್ವಾಮಿ ಮಂಡಿಸಿದ್ದು) 1,500 ಕೋಟಿ ಕ್ರಿಯಾಯೋಜನೆ ರೂಪಿಸಲಾಗಿದೆ. ಇದರಲ್ಲಿ ಶೇ. 5ರಷ್ಟು ಮುಖ್ಯಮಂತ್ರಿಗಳ ವಿವೇಚನಾ ನಿಧಿ ಇರುತ್ತದೆ. ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಶೇ.5 ಅಂದರೆ 75 ಕೋಟಿ ರೂಪಾಯಿಗಳನ್ನು ಆದಷ್ಟು ತಾರತಮ್ಯವಿಲ್ಲದೇ ಹಂಚಿದ್ದರು. ಆದರೆ, ಮೊನ್ನೆ ಈ ಆದೇಶ ರದ್ದು ಮಾಡಿದ ಯಡಿಯೂರಪ್ಪನವರು, ಇಬ್ಬರು ಅನರ್ಹ ಶಾಸಕರ ( ಆನಂದ್‍ಸಿಂಗ್, ಪ್ರತಾಪಗೌಡ) ಕ್ಷೇತ್ರಗಳಿಗೆ ತಲಾ 11 ಕೋಟಿ ಬಿಡುಗಡೆ ಮಾಡಿದ್ದಾರೆ. ಹೈದರಾಬಾದದ-ಕರ್ನಾಟಕದ 42 ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರ ಗೆದ್ದಿದೆ. ಅದರಲ್ಲಿ 16 ಕ್ಷೇತ್ರಗಳಿಗೆ ತಲಾ 3 ಕೋಟಿಗಳನ್ನು ಮತ್ತು ಇನ್ನೊಂದು ಬಿಜೆಪಿ ಗೆದ್ದಿರುವ ಕ್ಷೇತ್ರವಾದ ರಾಯಚೂರು ನಗರಕ್ಕೆ 4 ಕೋಟಿ ಬಿಡುಗಡೆ ಮಾಡಿದ್ದಾರೆ. ಅಂದರೆ, ಬಿಜೆಪಿಯ 17 ಮತ್ತು ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳನ್ನು ಬಿಟ್ಟು ಎಲ್ಲ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡದೇ ತಾವೆಷ್ಟು ಪಕ್ಷಪಾತಿ ಸಿಎಂ ಎಂದು ಸಾಬೀತು ಮಾಡಿದ್ದಾರೆ ಯಡಿಯೂರಪ್ಪ…

ಈಗಾಗಲೇ ಕುಮಾರಸ್ವಾಮಿ ಈ ಕುರಿತು ಅಪಸ್ವರ ಎತ್ತಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಇರುವ ಗುರುಮಿಠಕಲ್ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಿಡುಗಡೆ ಮಾಡಲು ಉದ್ದೇಶಿಸಿದ್ದ 4.5 ಕೋಟಿ ಅನುದಾನವನ್ನು ಯಡಿಯೂರಪ್ಪ ರದ್ದು ಮಾಡಿದ್ದಾರೆ. (ಈ ಕ್ಷೇತ್ರದ ಶಾಸಕರ ಮಗ ಶರಣೇಗೌಡನೇ ದೇವದುರ್ಗದ ಐಬಿಯಲ್ಲಿ ಯಡಿಯೂರಪ್ಪರನ್ನು ಆಪರೇಷನ್ ಕಮಲದ ಆಡಿಯೋ ಖೆಡ್ಡಾಕ್ಕೆ ಕೆಡವಿದ್ದು!)
ನೆರೆಪೀಡಿತ ಲಿಂಗಸಗೂರು ತಾಲೂಕಿಗೂ ನಯಾಪೈಸೆಯಿಲ್ಲ, ಪ್ರವಾಹಬಾಧಿತ ರಾಯಚೂರು ಗ್ರಾಮೀಣಕ್ಕೂ ಬಿಡಿಗಾಸಿಲ್ಲ! ಆದರೆ, ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಪ್ರತಿನಿಧಿಸುವ ರಾಯಚೂರು ನಗರಕ್ಕೆ 4 ಕೋಟಿ! ಶಾಸಕರೇ ಇಲ್ಲದ (ಅನರ್ಹರ) ಕ್ಷೇತ್ರಗಳಿಗೆ ತಮ್ಮ ವಿವೇಚನಾ ನಿಧಿ 75 ಕೋಟಿಯಲ್ಲಿ 22 ಕೋಟಿ ರೂಪಾಯಿ!

ವಿವೇಚನಾಶೂನ್ಯ ಸಿಎಂ: ರಾಘವೇಂದ್ರ ಕುಷ್ಟಗಿ
ವಿವೇಚನಾ ನಿಧಿಯನ್ನು ಇಷ್ಟು ಕ್ಷುಲ್ಲಕ ಶೈಲಿಯಲ್ಲಿ ಹಂಚಿದ ಮುಖ್ಯಮಂತ್ರಿಯನ್ನು ನಾನು ನೋಡೇ ಇಲ್ಲ. ಹೀಗೆಲ್ಲ ಅಸಮಾನ ಹಂಚಿಕೆ ಮಾಡುವ ಇವರೆಲ್ಲ ಸಮಾನತೆ ಕನಸಿನ ಕಲ್ಯಾಣ ಎಂಬ ಪದವನ್ನೇ ಅವಮಾನ ಮಾಡಿದ್ದಾರೆ. ಈ ನಡುವೆ ಒಂದೇ ಒಂದು ಸಾರಿಯೂ ಹೈ-ಕ ಅಭಿವೃದ್ಧಿ ಮಂಡಳಿ ಸಭೆಗೆ ಹಾಜರಾಗದೇ ನಿರ್ಗಮಿಸುತ್ತಿರುವ ರಾಜ್ಯಪಾಲ ವಜುಭಾಯಿಯವರ ಧೋರಣೆಯನ್ನೂ ಗಮನಿಸಿ ಹೇಳುವುದಾದರೆ ಹೈ-ಕದ ಮೊದಲ ಶತ್ರು ಬಿಜೆಪಿಯೇ ಆಗಿದೆ… ವಿವೇಚನಾಶೂನ್ಯ ಸಿಎಂಗೆ ಇಲ್ಲಿನ ಜನ ಪಾಠ ಕಲಿಸಲೇಬೇಕು ಎಂದು ಜನ ಸಂಗ್ರಾಮ ಪರಿಷತ್‍ನ ರಾಘವೇಂದ್ರ ಕುಷ್ಟಗಿ ಹೇಳುತ್ತಾರೆ.

ಟೋಟಲಿ ನಾನ್‍ಸೆನ್ಸ್ ನಿರ್ಧಾರ: ರಜಾಕ್ ಉಸ್ತಾದ್
ಯಡಿಯೂರಪ್ಪನವರ ಈ ನಿರ್ಧಾರ ಟೋಟಲಿ ನಾನ್‍ಸೆನ್ಸ್ ಎಂದು ಆಕ್ರೋಶ ವ್ಯಕ್ತಪಡಿಸಿದ ಹೈ-ಕ ಅಭಿವೃದ್ಧಿ ಹೋರಾಟ ಸಮಿತಿಯ ರಜಾಕ್ ಉಸ್ತಾದ್, ‘ಹೈ-ಕ ಭಾಗದ ಎಲ್ಲ ಐದೂ ಸಂಸದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಜನ ಗೆಲ್ಲಿಸಿದ್ದಾರೆ. ಈ ಎಂಪಿಗಳ ಕ್ಷೇತ್ರಕ್ಕೆ ಬರುವ 25ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದು ರೂಪಾಯಿಯ ಅನುದಾನವನ್ನೂ ನೀಡಿಲ್ಲ. ನಾಚಿಕೆಯಾಗಬೇಕು ಈ ಐದೂ ಎಂಪಿಗಳಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...