Homeಕರ್ನಾಟಕಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಹೈದರಾಬಾದ್ ಕರ್ನಾಟಕದಲ್ಲಿ ಕೀಳು ರಾಜಕೀಯ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಅನರ್ಹರಿಗೆ ವಿವೇಚನಾಹೀನ ನಿಧಿ ನೀಡಿದ್ದು ಬಿಜೆಪಿಯೇತರ ಶಾಸಕರಿಗೆ ದುರ್ವಿಧಿ ಘೋಷಿಸಿದ್ದಾರೆ.

- Advertisement -
- Advertisement -

ಪ್ರವಾಹಪೀಡಿತ ಪ್ರದೇಶಗಳಿಗೆ ಅನುದಾನ ಕೊಡುವುದಿರಲಿ, 10 ಸಾವಿರ ಕೊಟ್ಟದ್ದೇ ಹೆಚ್ಚು ಎಂದು ಸಂತ್ರಸ್ತ ಕುಟುಂಬಗಳನ್ನು ಸಚಿವ ಕೆ.ಎಸ್. ಈಶ್ವರಪ್ಪ ಅವಮಾನಿಸಿ ಹೋಗಿದ್ದಾರೆ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶಿಕಾರಿಪುರ ತಾಲೂಕಿಗೆ ಏಕಾಏಕಿ 1,100 ಕೋಟಿ ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ, ಉಳಿದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 3 ಕೋಟಿ ಅನುದಾನವನ್ನು ನೀಡಿರುವ ಯಡಿಯೂರಪ್ಪ, 23 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನಯಾಪೈಸೆಯನ್ನೂ ನೀಡಿಲ್ಲ. ಅಸಹ್ಯ ಆಡಳಿತ ಮತ್ತು ಸ್ವಾರ್ಥ ರಾಜಕಾರಣಕ್ಕೆ ಇದಕ್ಕಿಂತ ಉದಾಹರಣೆ ಬೇಕೇ?

ನೆರೆಪೀಡಿತ ಪ್ರದೇಶಗಳಿಗೂ ಚಿಕ್ಕಾಸೂ ಬಿಡುಗಡೆ ಮಾಡಲು ಒಲ್ಲದ ದೇಶದ ಪ್ರಧಾನಿ ಚಂದಮಾಮಾನನ್ನು ತೋರಿಸಲು ಬೆಂಗಳೂರಿಗೆ ಬಂದು ಕರ್ನಾಟಕದ ಸಂಕಟಗಳಿಗೆ ಬೆನ್ನು ಮಾಡಿ ಹೋಗುತ್ತಾರೆ. ಇತ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ‘ನಿಮ್ಗೆಲ್ಲ 10 ಸಾವಿರ ಪರಿಹಾರ ಕೊಟ್ಟಿದ್ದೇ ಜಾಸ್ತಿ ಹೋಗ್ರಿ’ ಎಂದು ಉದ್ಧಟತನದ ಮಾತಾಡಿ ಜನರ ಆಕ್ರೋಶಕ್ಕೆ ಗುರುಯಾಗಿದ್ದಾರೆ. ಅವರ ಕಾರಿಗೆ ಮುತ್ತಿಗೆ ಹಾಕಿದ ಜನ ಕಾರನ್ನು ಗುದ್ದಿ ಗುದ್ದಿ ತಮ್ಮ ಅಸಹನೆ ವ್ಯಕ್ತಪಡಿಸಿದ್ದಾರೆ.

ಅದಕ್ಕಿಂತ ಹೀನ ಕೆಲಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುವ ಮೂಲಕ ಹೈದರಾಬಾದ್-ಕರ್ನಾಟಕದ ಜನರ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ. ಪ್ರವಾಹ, ನೆರೆ ಮತ್ತು ಬರ ಇದ್ಯಾವುದರ ಬಗ್ಗೆಯೂ ನಮಗೆ ಚಿಂತೆಯಿಲ್ಲ, ನಮಗೀಗ ಉಪ ಚುನಾವಣೆಗಳನ್ನು ಗೆಲ್ಲಬೇಕು ಮತ್ತು ಹೈಮಾಂಡ್ ಹೇಳಿದ್ದನ್ನು ಎಲ್ಲ ಮುಚ್ಚಿಕೊಂಡು ಪಾಲಿಸಬೇಕು ಎಂಬ ಸಂದೇಶವನ್ನು ಸಿಎಂ ಯಡಿಯೂರಪ್ಪ ತಮ್ಮ ಅಪ್ರಬುದ್ಧ, ಅಸಂಬದ್ಧ ಆದೇಶಗಳ ಮೂಲಕ ಜಗಜ್ಜಾಹೀರು ಮಾಡಿದ್ದಾರೆ.

ನೆರೆಪೀಡಿತರಿಗೆ ನಕೋ, ಅನರ್ಹರಿಗೆ ಪೀಕೋ ಪೀಕು
ಒಂದು ಕಡೆ ನೆರೆಪ್ರವಾಹದಿಂದ, ಇನ್ನೊಂದು ಕಡೆ ಪ್ರವಾಹದಿಂದ ಉತ್ತರ ಕರ್ನಾಟಕದ ಬಹುಭಾಗ ಮತ್ತು ದಕ್ಷಿಣ ಕರ್ನಾಟಕದ ಕೆಲ ಭಾಗಗಳಲ್ಲಿ ಜೀವನ ಅಸ್ತವ್ಯಸ್ತವಾಗಿದೆ, ಬೆಳೆಗಳು (ಪೀಕು) ನಾಶವಾಗಿವೆ. ಆದರೆ, ಅನರ್ಹ ಶಾಸಕರಿಗೆ ಮಾತ್ರ ಪೀಕೋ ಪೀಕು. ಸರ್ಕಾರ ಉರುಳಿಸಲು ಸಾಕಷ್ಟು ‘ಪೀಕಿದ’ ಈ ಅನರ್ಹರಿಗೆ ಈ ಸಚಿವ ಸ್ಥಾನ ಕೊಡಲಂತೂ ಆಗುವುದಿಲ್ಲ. ಆದರೆ, ಐದು ತಿಂಗಳಿಗೇ ಬರಲಿರುವ 17 ಉಪ ಚುನಾವಣೆಗಳಲ್ಲಿ ಕನಿಷ್ಠ 10ರಲ್ಲಾದರೂ ಗೆಲ್ಲಲೇಬೇಕು.

ಹೀಗಾಗಿ ಯಡಿಯೂರಪ್ಪ ಸರ್ಕಾರ ಈಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಅನುದಾನ ಕೊಡಲು ಪ್ಲಾನು ಮಾಡಿದೆ. ಅದರ ಮೊದಲ ಭಾಗವಾಗಿ ಈಗ ಹೈದರಾಬಾದ್-ಕರ್ನಾಟಕದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದಾರೆ ಯಡಿಯೂರಪ್ಪ. ವಿಜಯನಗರ-ಹೊಸಪೇಟೆ (ಆನಂದಸಿಂಗ್-ಅನರ್ಹ) ಮತ್ತು ಮಸ್ಕಿ (ಪ್ರತಾಪಗೌಡ- ಅನರ್ಹ) ಈ ಇಬ್ಬರಿಗೂ ಬೋನಸ್ ನೀಡುವ ಮೂಲಕ ಬರಲಿರುವ ಉಪಚುನಾವಣೆಗಳ ಮೇಲೆ ಯಡಿಯೂರಪ್ಪ ಕಣ್ಣು ಹಾಕಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಝೀರೊ!
ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಈ ಬಜೆಟ್ಟಿನಲ್ಲಿ (ಕುಮಾರಸ್ವಾಮಿ ಮಂಡಿಸಿದ್ದು) 1,500 ಕೋಟಿ ಕ್ರಿಯಾಯೋಜನೆ ರೂಪಿಸಲಾಗಿದೆ. ಇದರಲ್ಲಿ ಶೇ. 5ರಷ್ಟು ಮುಖ್ಯಮಂತ್ರಿಗಳ ವಿವೇಚನಾ ನಿಧಿ ಇರುತ್ತದೆ. ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಶೇ.5 ಅಂದರೆ 75 ಕೋಟಿ ರೂಪಾಯಿಗಳನ್ನು ಆದಷ್ಟು ತಾರತಮ್ಯವಿಲ್ಲದೇ ಹಂಚಿದ್ದರು. ಆದರೆ, ಮೊನ್ನೆ ಈ ಆದೇಶ ರದ್ದು ಮಾಡಿದ ಯಡಿಯೂರಪ್ಪನವರು, ಇಬ್ಬರು ಅನರ್ಹ ಶಾಸಕರ ( ಆನಂದ್‍ಸಿಂಗ್, ಪ್ರತಾಪಗೌಡ) ಕ್ಷೇತ್ರಗಳಿಗೆ ತಲಾ 11 ಕೋಟಿ ಬಿಡುಗಡೆ ಮಾಡಿದ್ದಾರೆ. ಹೈದರಾಬಾದದ-ಕರ್ನಾಟಕದ 42 ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರ ಗೆದ್ದಿದೆ. ಅದರಲ್ಲಿ 16 ಕ್ಷೇತ್ರಗಳಿಗೆ ತಲಾ 3 ಕೋಟಿಗಳನ್ನು ಮತ್ತು ಇನ್ನೊಂದು ಬಿಜೆಪಿ ಗೆದ್ದಿರುವ ಕ್ಷೇತ್ರವಾದ ರಾಯಚೂರು ನಗರಕ್ಕೆ 4 ಕೋಟಿ ಬಿಡುಗಡೆ ಮಾಡಿದ್ದಾರೆ. ಅಂದರೆ, ಬಿಜೆಪಿಯ 17 ಮತ್ತು ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳನ್ನು ಬಿಟ್ಟು ಎಲ್ಲ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡದೇ ತಾವೆಷ್ಟು ಪಕ್ಷಪಾತಿ ಸಿಎಂ ಎಂದು ಸಾಬೀತು ಮಾಡಿದ್ದಾರೆ ಯಡಿಯೂರಪ್ಪ…

ಈಗಾಗಲೇ ಕುಮಾರಸ್ವಾಮಿ ಈ ಕುರಿತು ಅಪಸ್ವರ ಎತ್ತಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಇರುವ ಗುರುಮಿಠಕಲ್ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಿಡುಗಡೆ ಮಾಡಲು ಉದ್ದೇಶಿಸಿದ್ದ 4.5 ಕೋಟಿ ಅನುದಾನವನ್ನು ಯಡಿಯೂರಪ್ಪ ರದ್ದು ಮಾಡಿದ್ದಾರೆ. (ಈ ಕ್ಷೇತ್ರದ ಶಾಸಕರ ಮಗ ಶರಣೇಗೌಡನೇ ದೇವದುರ್ಗದ ಐಬಿಯಲ್ಲಿ ಯಡಿಯೂರಪ್ಪರನ್ನು ಆಪರೇಷನ್ ಕಮಲದ ಆಡಿಯೋ ಖೆಡ್ಡಾಕ್ಕೆ ಕೆಡವಿದ್ದು!)
ನೆರೆಪೀಡಿತ ಲಿಂಗಸಗೂರು ತಾಲೂಕಿಗೂ ನಯಾಪೈಸೆಯಿಲ್ಲ, ಪ್ರವಾಹಬಾಧಿತ ರಾಯಚೂರು ಗ್ರಾಮೀಣಕ್ಕೂ ಬಿಡಿಗಾಸಿಲ್ಲ! ಆದರೆ, ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಪ್ರತಿನಿಧಿಸುವ ರಾಯಚೂರು ನಗರಕ್ಕೆ 4 ಕೋಟಿ! ಶಾಸಕರೇ ಇಲ್ಲದ (ಅನರ್ಹರ) ಕ್ಷೇತ್ರಗಳಿಗೆ ತಮ್ಮ ವಿವೇಚನಾ ನಿಧಿ 75 ಕೋಟಿಯಲ್ಲಿ 22 ಕೋಟಿ ರೂಪಾಯಿ!

ವಿವೇಚನಾಶೂನ್ಯ ಸಿಎಂ: ರಾಘವೇಂದ್ರ ಕುಷ್ಟಗಿ
ವಿವೇಚನಾ ನಿಧಿಯನ್ನು ಇಷ್ಟು ಕ್ಷುಲ್ಲಕ ಶೈಲಿಯಲ್ಲಿ ಹಂಚಿದ ಮುಖ್ಯಮಂತ್ರಿಯನ್ನು ನಾನು ನೋಡೇ ಇಲ್ಲ. ಹೀಗೆಲ್ಲ ಅಸಮಾನ ಹಂಚಿಕೆ ಮಾಡುವ ಇವರೆಲ್ಲ ಸಮಾನತೆ ಕನಸಿನ ಕಲ್ಯಾಣ ಎಂಬ ಪದವನ್ನೇ ಅವಮಾನ ಮಾಡಿದ್ದಾರೆ. ಈ ನಡುವೆ ಒಂದೇ ಒಂದು ಸಾರಿಯೂ ಹೈ-ಕ ಅಭಿವೃದ್ಧಿ ಮಂಡಳಿ ಸಭೆಗೆ ಹಾಜರಾಗದೇ ನಿರ್ಗಮಿಸುತ್ತಿರುವ ರಾಜ್ಯಪಾಲ ವಜುಭಾಯಿಯವರ ಧೋರಣೆಯನ್ನೂ ಗಮನಿಸಿ ಹೇಳುವುದಾದರೆ ಹೈ-ಕದ ಮೊದಲ ಶತ್ರು ಬಿಜೆಪಿಯೇ ಆಗಿದೆ… ವಿವೇಚನಾಶೂನ್ಯ ಸಿಎಂಗೆ ಇಲ್ಲಿನ ಜನ ಪಾಠ ಕಲಿಸಲೇಬೇಕು ಎಂದು ಜನ ಸಂಗ್ರಾಮ ಪರಿಷತ್‍ನ ರಾಘವೇಂದ್ರ ಕುಷ್ಟಗಿ ಹೇಳುತ್ತಾರೆ.

ಟೋಟಲಿ ನಾನ್‍ಸೆನ್ಸ್ ನಿರ್ಧಾರ: ರಜಾಕ್ ಉಸ್ತಾದ್
ಯಡಿಯೂರಪ್ಪನವರ ಈ ನಿರ್ಧಾರ ಟೋಟಲಿ ನಾನ್‍ಸೆನ್ಸ್ ಎಂದು ಆಕ್ರೋಶ ವ್ಯಕ್ತಪಡಿಸಿದ ಹೈ-ಕ ಅಭಿವೃದ್ಧಿ ಹೋರಾಟ ಸಮಿತಿಯ ರಜಾಕ್ ಉಸ್ತಾದ್, ‘ಹೈ-ಕ ಭಾಗದ ಎಲ್ಲ ಐದೂ ಸಂಸದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಜನ ಗೆಲ್ಲಿಸಿದ್ದಾರೆ. ಈ ಎಂಪಿಗಳ ಕ್ಷೇತ್ರಕ್ಕೆ ಬರುವ 25ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದು ರೂಪಾಯಿಯ ಅನುದಾನವನ್ನೂ ನೀಡಿಲ್ಲ. ನಾಚಿಕೆಯಾಗಬೇಕು ಈ ಐದೂ ಎಂಪಿಗಳಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...