Homeಕರ್ನಾಟಕಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ, ಉಳಿದ ಕ್ಷೇತ್ರಗಳಿಗೆ ಪಂಗನಾಮ: ಯಡ್ಡಿಯ ಕೀಳು ರಾಜಕೀಯ

ಹೈದರಾಬಾದ್ ಕರ್ನಾಟಕದಲ್ಲಿ ಕೀಳು ರಾಜಕೀಯ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಅನರ್ಹರಿಗೆ ವಿವೇಚನಾಹೀನ ನಿಧಿ ನೀಡಿದ್ದು ಬಿಜೆಪಿಯೇತರ ಶಾಸಕರಿಗೆ ದುರ್ವಿಧಿ ಘೋಷಿಸಿದ್ದಾರೆ.

- Advertisement -
- Advertisement -

ಪ್ರವಾಹಪೀಡಿತ ಪ್ರದೇಶಗಳಿಗೆ ಅನುದಾನ ಕೊಡುವುದಿರಲಿ, 10 ಸಾವಿರ ಕೊಟ್ಟದ್ದೇ ಹೆಚ್ಚು ಎಂದು ಸಂತ್ರಸ್ತ ಕುಟುಂಬಗಳನ್ನು ಸಚಿವ ಕೆ.ಎಸ್. ಈಶ್ವರಪ್ಪ ಅವಮಾನಿಸಿ ಹೋಗಿದ್ದಾರೆ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶಿಕಾರಿಪುರ ತಾಲೂಕಿಗೆ ಏಕಾಏಕಿ 1,100 ಕೋಟಿ ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ, ಉಳಿದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 3 ಕೋಟಿ ಅನುದಾನವನ್ನು ನೀಡಿರುವ ಯಡಿಯೂರಪ್ಪ, 23 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನಯಾಪೈಸೆಯನ್ನೂ ನೀಡಿಲ್ಲ. ಅಸಹ್ಯ ಆಡಳಿತ ಮತ್ತು ಸ್ವಾರ್ಥ ರಾಜಕಾರಣಕ್ಕೆ ಇದಕ್ಕಿಂತ ಉದಾಹರಣೆ ಬೇಕೇ?

ನೆರೆಪೀಡಿತ ಪ್ರದೇಶಗಳಿಗೂ ಚಿಕ್ಕಾಸೂ ಬಿಡುಗಡೆ ಮಾಡಲು ಒಲ್ಲದ ದೇಶದ ಪ್ರಧಾನಿ ಚಂದಮಾಮಾನನ್ನು ತೋರಿಸಲು ಬೆಂಗಳೂರಿಗೆ ಬಂದು ಕರ್ನಾಟಕದ ಸಂಕಟಗಳಿಗೆ ಬೆನ್ನು ಮಾಡಿ ಹೋಗುತ್ತಾರೆ. ಇತ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ‘ನಿಮ್ಗೆಲ್ಲ 10 ಸಾವಿರ ಪರಿಹಾರ ಕೊಟ್ಟಿದ್ದೇ ಜಾಸ್ತಿ ಹೋಗ್ರಿ’ ಎಂದು ಉದ್ಧಟತನದ ಮಾತಾಡಿ ಜನರ ಆಕ್ರೋಶಕ್ಕೆ ಗುರುಯಾಗಿದ್ದಾರೆ. ಅವರ ಕಾರಿಗೆ ಮುತ್ತಿಗೆ ಹಾಕಿದ ಜನ ಕಾರನ್ನು ಗುದ್ದಿ ಗುದ್ದಿ ತಮ್ಮ ಅಸಹನೆ ವ್ಯಕ್ತಪಡಿಸಿದ್ದಾರೆ.

ಅದಕ್ಕಿಂತ ಹೀನ ಕೆಲಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುವ ಮೂಲಕ ಹೈದರಾಬಾದ್-ಕರ್ನಾಟಕದ ಜನರ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ. ಪ್ರವಾಹ, ನೆರೆ ಮತ್ತು ಬರ ಇದ್ಯಾವುದರ ಬಗ್ಗೆಯೂ ನಮಗೆ ಚಿಂತೆಯಿಲ್ಲ, ನಮಗೀಗ ಉಪ ಚುನಾವಣೆಗಳನ್ನು ಗೆಲ್ಲಬೇಕು ಮತ್ತು ಹೈಮಾಂಡ್ ಹೇಳಿದ್ದನ್ನು ಎಲ್ಲ ಮುಚ್ಚಿಕೊಂಡು ಪಾಲಿಸಬೇಕು ಎಂಬ ಸಂದೇಶವನ್ನು ಸಿಎಂ ಯಡಿಯೂರಪ್ಪ ತಮ್ಮ ಅಪ್ರಬುದ್ಧ, ಅಸಂಬದ್ಧ ಆದೇಶಗಳ ಮೂಲಕ ಜಗಜ್ಜಾಹೀರು ಮಾಡಿದ್ದಾರೆ.

ನೆರೆಪೀಡಿತರಿಗೆ ನಕೋ, ಅನರ್ಹರಿಗೆ ಪೀಕೋ ಪೀಕು
ಒಂದು ಕಡೆ ನೆರೆಪ್ರವಾಹದಿಂದ, ಇನ್ನೊಂದು ಕಡೆ ಪ್ರವಾಹದಿಂದ ಉತ್ತರ ಕರ್ನಾಟಕದ ಬಹುಭಾಗ ಮತ್ತು ದಕ್ಷಿಣ ಕರ್ನಾಟಕದ ಕೆಲ ಭಾಗಗಳಲ್ಲಿ ಜೀವನ ಅಸ್ತವ್ಯಸ್ತವಾಗಿದೆ, ಬೆಳೆಗಳು (ಪೀಕು) ನಾಶವಾಗಿವೆ. ಆದರೆ, ಅನರ್ಹ ಶಾಸಕರಿಗೆ ಮಾತ್ರ ಪೀಕೋ ಪೀಕು. ಸರ್ಕಾರ ಉರುಳಿಸಲು ಸಾಕಷ್ಟು ‘ಪೀಕಿದ’ ಈ ಅನರ್ಹರಿಗೆ ಈ ಸಚಿವ ಸ್ಥಾನ ಕೊಡಲಂತೂ ಆಗುವುದಿಲ್ಲ. ಆದರೆ, ಐದು ತಿಂಗಳಿಗೇ ಬರಲಿರುವ 17 ಉಪ ಚುನಾವಣೆಗಳಲ್ಲಿ ಕನಿಷ್ಠ 10ರಲ್ಲಾದರೂ ಗೆಲ್ಲಲೇಬೇಕು.

ಹೀಗಾಗಿ ಯಡಿಯೂರಪ್ಪ ಸರ್ಕಾರ ಈಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಅನುದಾನ ಕೊಡಲು ಪ್ಲಾನು ಮಾಡಿದೆ. ಅದರ ಮೊದಲ ಭಾಗವಾಗಿ ಈಗ ಹೈದರಾಬಾದ್-ಕರ್ನಾಟಕದ ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳಿಗೆ ತಲಾ 11 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದಾರೆ ಯಡಿಯೂರಪ್ಪ. ವಿಜಯನಗರ-ಹೊಸಪೇಟೆ (ಆನಂದಸಿಂಗ್-ಅನರ್ಹ) ಮತ್ತು ಮಸ್ಕಿ (ಪ್ರತಾಪಗೌಡ- ಅನರ್ಹ) ಈ ಇಬ್ಬರಿಗೂ ಬೋನಸ್ ನೀಡುವ ಮೂಲಕ ಬರಲಿರುವ ಉಪಚುನಾವಣೆಗಳ ಮೇಲೆ ಯಡಿಯೂರಪ್ಪ ಕಣ್ಣು ಹಾಕಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಝೀರೊ!
ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಈ ಬಜೆಟ್ಟಿನಲ್ಲಿ (ಕುಮಾರಸ್ವಾಮಿ ಮಂಡಿಸಿದ್ದು) 1,500 ಕೋಟಿ ಕ್ರಿಯಾಯೋಜನೆ ರೂಪಿಸಲಾಗಿದೆ. ಇದರಲ್ಲಿ ಶೇ. 5ರಷ್ಟು ಮುಖ್ಯಮಂತ್ರಿಗಳ ವಿವೇಚನಾ ನಿಧಿ ಇರುತ್ತದೆ. ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಶೇ.5 ಅಂದರೆ 75 ಕೋಟಿ ರೂಪಾಯಿಗಳನ್ನು ಆದಷ್ಟು ತಾರತಮ್ಯವಿಲ್ಲದೇ ಹಂಚಿದ್ದರು. ಆದರೆ, ಮೊನ್ನೆ ಈ ಆದೇಶ ರದ್ದು ಮಾಡಿದ ಯಡಿಯೂರಪ್ಪನವರು, ಇಬ್ಬರು ಅನರ್ಹ ಶಾಸಕರ ( ಆನಂದ್‍ಸಿಂಗ್, ಪ್ರತಾಪಗೌಡ) ಕ್ಷೇತ್ರಗಳಿಗೆ ತಲಾ 11 ಕೋಟಿ ಬಿಡುಗಡೆ ಮಾಡಿದ್ದಾರೆ. ಹೈದರಾಬಾದದ-ಕರ್ನಾಟಕದ 42 ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರ ಗೆದ್ದಿದೆ. ಅದರಲ್ಲಿ 16 ಕ್ಷೇತ್ರಗಳಿಗೆ ತಲಾ 3 ಕೋಟಿಗಳನ್ನು ಮತ್ತು ಇನ್ನೊಂದು ಬಿಜೆಪಿ ಗೆದ್ದಿರುವ ಕ್ಷೇತ್ರವಾದ ರಾಯಚೂರು ನಗರಕ್ಕೆ 4 ಕೋಟಿ ಬಿಡುಗಡೆ ಮಾಡಿದ್ದಾರೆ. ಅಂದರೆ, ಬಿಜೆಪಿಯ 17 ಮತ್ತು ಇಬ್ಬರು ಅನರ್ಹ ಶಾಸಕರ ಕ್ಷೇತ್ರಗಳನ್ನು ಬಿಟ್ಟು ಎಲ್ಲ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡದೇ ತಾವೆಷ್ಟು ಪಕ್ಷಪಾತಿ ಸಿಎಂ ಎಂದು ಸಾಬೀತು ಮಾಡಿದ್ದಾರೆ ಯಡಿಯೂರಪ್ಪ…

ಈಗಾಗಲೇ ಕುಮಾರಸ್ವಾಮಿ ಈ ಕುರಿತು ಅಪಸ್ವರ ಎತ್ತಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಇರುವ ಗುರುಮಿಠಕಲ್ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಿಡುಗಡೆ ಮಾಡಲು ಉದ್ದೇಶಿಸಿದ್ದ 4.5 ಕೋಟಿ ಅನುದಾನವನ್ನು ಯಡಿಯೂರಪ್ಪ ರದ್ದು ಮಾಡಿದ್ದಾರೆ. (ಈ ಕ್ಷೇತ್ರದ ಶಾಸಕರ ಮಗ ಶರಣೇಗೌಡನೇ ದೇವದುರ್ಗದ ಐಬಿಯಲ್ಲಿ ಯಡಿಯೂರಪ್ಪರನ್ನು ಆಪರೇಷನ್ ಕಮಲದ ಆಡಿಯೋ ಖೆಡ್ಡಾಕ್ಕೆ ಕೆಡವಿದ್ದು!)
ನೆರೆಪೀಡಿತ ಲಿಂಗಸಗೂರು ತಾಲೂಕಿಗೂ ನಯಾಪೈಸೆಯಿಲ್ಲ, ಪ್ರವಾಹಬಾಧಿತ ರಾಯಚೂರು ಗ್ರಾಮೀಣಕ್ಕೂ ಬಿಡಿಗಾಸಿಲ್ಲ! ಆದರೆ, ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಪ್ರತಿನಿಧಿಸುವ ರಾಯಚೂರು ನಗರಕ್ಕೆ 4 ಕೋಟಿ! ಶಾಸಕರೇ ಇಲ್ಲದ (ಅನರ್ಹರ) ಕ್ಷೇತ್ರಗಳಿಗೆ ತಮ್ಮ ವಿವೇಚನಾ ನಿಧಿ 75 ಕೋಟಿಯಲ್ಲಿ 22 ಕೋಟಿ ರೂಪಾಯಿ!

ವಿವೇಚನಾಶೂನ್ಯ ಸಿಎಂ: ರಾಘವೇಂದ್ರ ಕುಷ್ಟಗಿ
ವಿವೇಚನಾ ನಿಧಿಯನ್ನು ಇಷ್ಟು ಕ್ಷುಲ್ಲಕ ಶೈಲಿಯಲ್ಲಿ ಹಂಚಿದ ಮುಖ್ಯಮಂತ್ರಿಯನ್ನು ನಾನು ನೋಡೇ ಇಲ್ಲ. ಹೀಗೆಲ್ಲ ಅಸಮಾನ ಹಂಚಿಕೆ ಮಾಡುವ ಇವರೆಲ್ಲ ಸಮಾನತೆ ಕನಸಿನ ಕಲ್ಯಾಣ ಎಂಬ ಪದವನ್ನೇ ಅವಮಾನ ಮಾಡಿದ್ದಾರೆ. ಈ ನಡುವೆ ಒಂದೇ ಒಂದು ಸಾರಿಯೂ ಹೈ-ಕ ಅಭಿವೃದ್ಧಿ ಮಂಡಳಿ ಸಭೆಗೆ ಹಾಜರಾಗದೇ ನಿರ್ಗಮಿಸುತ್ತಿರುವ ರಾಜ್ಯಪಾಲ ವಜುಭಾಯಿಯವರ ಧೋರಣೆಯನ್ನೂ ಗಮನಿಸಿ ಹೇಳುವುದಾದರೆ ಹೈ-ಕದ ಮೊದಲ ಶತ್ರು ಬಿಜೆಪಿಯೇ ಆಗಿದೆ… ವಿವೇಚನಾಶೂನ್ಯ ಸಿಎಂಗೆ ಇಲ್ಲಿನ ಜನ ಪಾಠ ಕಲಿಸಲೇಬೇಕು ಎಂದು ಜನ ಸಂಗ್ರಾಮ ಪರಿಷತ್‍ನ ರಾಘವೇಂದ್ರ ಕುಷ್ಟಗಿ ಹೇಳುತ್ತಾರೆ.

ಟೋಟಲಿ ನಾನ್‍ಸೆನ್ಸ್ ನಿರ್ಧಾರ: ರಜಾಕ್ ಉಸ್ತಾದ್
ಯಡಿಯೂರಪ್ಪನವರ ಈ ನಿರ್ಧಾರ ಟೋಟಲಿ ನಾನ್‍ಸೆನ್ಸ್ ಎಂದು ಆಕ್ರೋಶ ವ್ಯಕ್ತಪಡಿಸಿದ ಹೈ-ಕ ಅಭಿವೃದ್ಧಿ ಹೋರಾಟ ಸಮಿತಿಯ ರಜಾಕ್ ಉಸ್ತಾದ್, ‘ಹೈ-ಕ ಭಾಗದ ಎಲ್ಲ ಐದೂ ಸಂಸದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಜನ ಗೆಲ್ಲಿಸಿದ್ದಾರೆ. ಈ ಎಂಪಿಗಳ ಕ್ಷೇತ್ರಕ್ಕೆ ಬರುವ 25ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದು ರೂಪಾಯಿಯ ಅನುದಾನವನ್ನೂ ನೀಡಿಲ್ಲ. ನಾಚಿಕೆಯಾಗಬೇಕು ಈ ಐದೂ ಎಂಪಿಗಳಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...