Homeಕರ್ನಾಟಕದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

ದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ನಡೆಯುತ್ತಿಲ್ಲ. ದುರ್ಬಲ ಮನಸ್ಸಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಅಧಿಕಾರ ದಾಹ, ಸಮಯ ಸಾಧಕತನದಿಂದ ಆಡಳಿತ ನಡೆಸುತ್ತಿದ್ದು ಹೈಕಮಾಂಡ್ ನಿಂದ ಅವಮಾನ ಸಹಿಸುವುದು ಬಿಟ್ಟು ರಾಜಿನಾಮೆ ನೀಡುವುದೇ ಸೂಕ್ತ ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾಹುಲಿ ಅಲ್ಲ. ರಾಜಾ ಇಲಿ ಎಂಬ ಮಾತುಗಳನ್ನು ತುಮಕೂರಿನಲ್ಲೂ ಪುನರುಚ್ಚರಿಸಿದರು. ಕಾಂಗ್ರೆಸ್ ಜೆಡಿಎಸ್ ಶಾಸಕರು ರಾಜಿನಾಮೆ ನೀಡಿದಾಗ ಯಡಿಯೂರಪ್ಪ ವೀರಾವೇಶದ ಮಾತುಗಳನ್ನಾಡಿದರು. ನಾನು ಮುಖ್ಯಮಂತ್ರಿಯಾಗಿ ಒಂದು ಗಂಟೆಯೊಳಗೆ ಎಲ್ಲರನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಆದರೆ ಇದುವರೆಗೂ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಸಚಿವರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಕಿಚಾಯಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಮುಂದೆ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಗೋಗರೆದರು. ಜಿಎಸ್.ಟಿಯ ರಾಜ್ಯದ ಪಾಲಿನ ಹಣವನ್ನು ನೀಡುವಂತೆ ಕೋರಿದರು. ಗೃಹ ಸಚಿವ ಅಮಿತ್ ಶಾ ಅವರ ಬಳಿ ಹೋಗಿ ಮನವಿ ಮಾಡಿದರು. ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ. ನನಗೆ ಬೆಂಬಲವಾಗಿ ನಿಂತ ಶಾಸಕರನ್ನು ಮಂತ್ರಿ ಮಾಡಬೇಕೆಂದು ಶಾ ಅವರಿಗೆ ಮನವಿ ಮಾಡಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮುಖ್ಯಮಂತ್ರಿಗಳ ಮಾತುಗಳನ್ನೇ ಕೇಳುತ್ತಿಲ್ಲ. 24 ಗಂಟೆಗಳಲ್ಲಿ ಮಂತ್ರಿ ಮಾಡುತ್ತೇನೆಂದ ಮಾತುಗಳೆಲ್ಲವೂ ಸುಳ್ಳಾಗಿವೆ. ಯಾರೂ ಮುಖ್ಯಮಂತ್ರಿಗಳ ಮಾತುಗಳನ್ನು ಕೇಳದಂತಾಗಿದ್ದಾರೆ ಎಂದು ಲೇವಡಿ ಮಾಡಿದರು.

ಯಡಿಯೂರಪ್ಪನವರ ಶಕ್ತಿ ಕುಂದಿ ಹೋಗಿದೆ. ಮಠದ ಸ್ವಾಮೀಜಿಯೊಬ್ಬರು ತಮ್ಮ ಸುಮುದಾಯದವರನ್ನು ಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. ಅವರ ಮಾತಿಗೆ ಸಿಟ್ಟಿಗೆದ್ದ ಮುಖ್ಯಮಂತ್ರಿ ನಾಳೆಯೇ ರಾಜಿನಾಮೆ ಕೊಡುತ್ತೇನೆ ಎಂದು ಅಸಹಾಯಕತೆ ತೋರಿದರು. ಮುಖ್ಯಮಂತ್ರಿಗಳಿಗೆ ತಾಳ್ಮೆ ಇರಬೇಕು. ಯಾರೋ ಒಬ್ಬ ಸ್ವಾಮಿ ಮಾತನಾಡಿದ ಮಾತ್ರಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಬೇಕೇ? ಇದನ್ನು ನೋಡಿದರೆ ಯಡಿಯೂರಪ್ಪ ವೀಕ್ ಮೈಂಡ್ ಸಿಎಂ. ಇಂಥವರಿಂದ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.

ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ ವ್ಯಕ್ತಿಗಳು ಮತ್ತು ಶಕ್ತಿಗಳೇ ಇಂದೂ ಅವರನ್ನು ಮುಗಿಸುವ ಕೆಲಸ ಮಾಡುತ್ತಿವೆ. ನಾಲ್ಕು ಬಾರಿ ಮುಖ್ಯಮಂತ್ರಿಯಾದರೂ ಅವರಿಗೆ ಬಹುಮತ ಇಲ್ಲ. ಸಿಎಂಗೆ ಸ್ವಾಭಿಮಾನವಿದ್ದರೆ ರಾಜಿನಾಮೆ ಕೊಡುವುದು ಒಳ್ಳೆಯದು. ರಾಜ್ಯದ ಜನರ ವಿಶ್ವಾಸ ಗಳಿಸಲು ಯಡಿಯೂರಪ್ಪ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಸಿಎಎ ಮತ್ತು ಎನ್ಆರ್.ಸಿ ಸಂವಿಧಾನ ವಿರೋಧಿಯಾಗಿವೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುವ ಕೆಲಸವನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಂದಾಗಿದೆ. ಇದು ಸಂವಿಧಾನದ 14, 15, 21, 25 ಮತ್ತು 51 ಎ ಆರ್ಟಿಕಲ್ ಗಳಿಗೆ ವಿರುದ್ದವಾಗಿದೆ. ಇಂತಹ ಕಾಯ್ದೆಯ ಬಗ್ಗೆ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇಂತಹ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ದೇಶದ ಸಮಸ್ಯೆಗಳ ಬಗ್ಗೆ ಮಾತನಾಡದೆ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...