Homeಕರ್ನಾಟಕದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

ದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ನಡೆಯುತ್ತಿಲ್ಲ. ದುರ್ಬಲ ಮನಸ್ಸಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಅಧಿಕಾರ ದಾಹ, ಸಮಯ ಸಾಧಕತನದಿಂದ ಆಡಳಿತ ನಡೆಸುತ್ತಿದ್ದು ಹೈಕಮಾಂಡ್ ನಿಂದ ಅವಮಾನ ಸಹಿಸುವುದು ಬಿಟ್ಟು ರಾಜಿನಾಮೆ ನೀಡುವುದೇ ಸೂಕ್ತ ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾಹುಲಿ ಅಲ್ಲ. ರಾಜಾ ಇಲಿ ಎಂಬ ಮಾತುಗಳನ್ನು ತುಮಕೂರಿನಲ್ಲೂ ಪುನರುಚ್ಚರಿಸಿದರು. ಕಾಂಗ್ರೆಸ್ ಜೆಡಿಎಸ್ ಶಾಸಕರು ರಾಜಿನಾಮೆ ನೀಡಿದಾಗ ಯಡಿಯೂರಪ್ಪ ವೀರಾವೇಶದ ಮಾತುಗಳನ್ನಾಡಿದರು. ನಾನು ಮುಖ್ಯಮಂತ್ರಿಯಾಗಿ ಒಂದು ಗಂಟೆಯೊಳಗೆ ಎಲ್ಲರನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಆದರೆ ಇದುವರೆಗೂ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಸಚಿವರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಕಿಚಾಯಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಮುಂದೆ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಗೋಗರೆದರು. ಜಿಎಸ್.ಟಿಯ ರಾಜ್ಯದ ಪಾಲಿನ ಹಣವನ್ನು ನೀಡುವಂತೆ ಕೋರಿದರು. ಗೃಹ ಸಚಿವ ಅಮಿತ್ ಶಾ ಅವರ ಬಳಿ ಹೋಗಿ ಮನವಿ ಮಾಡಿದರು. ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ. ನನಗೆ ಬೆಂಬಲವಾಗಿ ನಿಂತ ಶಾಸಕರನ್ನು ಮಂತ್ರಿ ಮಾಡಬೇಕೆಂದು ಶಾ ಅವರಿಗೆ ಮನವಿ ಮಾಡಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮುಖ್ಯಮಂತ್ರಿಗಳ ಮಾತುಗಳನ್ನೇ ಕೇಳುತ್ತಿಲ್ಲ. 24 ಗಂಟೆಗಳಲ್ಲಿ ಮಂತ್ರಿ ಮಾಡುತ್ತೇನೆಂದ ಮಾತುಗಳೆಲ್ಲವೂ ಸುಳ್ಳಾಗಿವೆ. ಯಾರೂ ಮುಖ್ಯಮಂತ್ರಿಗಳ ಮಾತುಗಳನ್ನು ಕೇಳದಂತಾಗಿದ್ದಾರೆ ಎಂದು ಲೇವಡಿ ಮಾಡಿದರು.

ಯಡಿಯೂರಪ್ಪನವರ ಶಕ್ತಿ ಕುಂದಿ ಹೋಗಿದೆ. ಮಠದ ಸ್ವಾಮೀಜಿಯೊಬ್ಬರು ತಮ್ಮ ಸುಮುದಾಯದವರನ್ನು ಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. ಅವರ ಮಾತಿಗೆ ಸಿಟ್ಟಿಗೆದ್ದ ಮುಖ್ಯಮಂತ್ರಿ ನಾಳೆಯೇ ರಾಜಿನಾಮೆ ಕೊಡುತ್ತೇನೆ ಎಂದು ಅಸಹಾಯಕತೆ ತೋರಿದರು. ಮುಖ್ಯಮಂತ್ರಿಗಳಿಗೆ ತಾಳ್ಮೆ ಇರಬೇಕು. ಯಾರೋ ಒಬ್ಬ ಸ್ವಾಮಿ ಮಾತನಾಡಿದ ಮಾತ್ರಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಬೇಕೇ? ಇದನ್ನು ನೋಡಿದರೆ ಯಡಿಯೂರಪ್ಪ ವೀಕ್ ಮೈಂಡ್ ಸಿಎಂ. ಇಂಥವರಿಂದ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.

ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ ವ್ಯಕ್ತಿಗಳು ಮತ್ತು ಶಕ್ತಿಗಳೇ ಇಂದೂ ಅವರನ್ನು ಮುಗಿಸುವ ಕೆಲಸ ಮಾಡುತ್ತಿವೆ. ನಾಲ್ಕು ಬಾರಿ ಮುಖ್ಯಮಂತ್ರಿಯಾದರೂ ಅವರಿಗೆ ಬಹುಮತ ಇಲ್ಲ. ಸಿಎಂಗೆ ಸ್ವಾಭಿಮಾನವಿದ್ದರೆ ರಾಜಿನಾಮೆ ಕೊಡುವುದು ಒಳ್ಳೆಯದು. ರಾಜ್ಯದ ಜನರ ವಿಶ್ವಾಸ ಗಳಿಸಲು ಯಡಿಯೂರಪ್ಪ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಸಿಎಎ ಮತ್ತು ಎನ್ಆರ್.ಸಿ ಸಂವಿಧಾನ ವಿರೋಧಿಯಾಗಿವೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುವ ಕೆಲಸವನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಂದಾಗಿದೆ. ಇದು ಸಂವಿಧಾನದ 14, 15, 21, 25 ಮತ್ತು 51 ಎ ಆರ್ಟಿಕಲ್ ಗಳಿಗೆ ವಿರುದ್ದವಾಗಿದೆ. ಇಂತಹ ಕಾಯ್ದೆಯ ಬಗ್ಗೆ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇಂತಹ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ದೇಶದ ಸಮಸ್ಯೆಗಳ ಬಗ್ಗೆ ಮಾತನಾಡದೆ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...