Homeಮುಖಪುಟಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.”

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಂದು ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ


ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

“ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ”

ಎಂಬ ಬಸವಣ್ಣನವರ ವಚನವನ್ನು ಕುಮಾರಸ್ವಾಮಿಯವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಶುಕ್ರವಾರದಂತು ಸರಳ ರೀತಿಯಲ್ಲಿ ನಡೆಸಿದ್ದರು. ಆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಆದರೆ ನಿನ್ನೆ ಯಡಿಯೂರಪ್ಪನವರು “ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ. ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.


ಇದನ್ನೂ ಓದಿ: ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಎಂ ಸುಳ್ಳಿನ ಪರ ನಿಂತಿದ್ದಾರೆ. ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ ರೆಂಬುದು ಇದೇ ಜಗತ್ತಿಗೆ ಗೊತ್ತಿದೆ.
    ಬಸವಣ್ಣ ನಾ ವಚನ heli, ಅದಕ್ಕೆ ಅವಮಾನ ಮಾಡ್ಬೇಡಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...