Homeಮುಖಪುಟಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.”

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಂದು ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ


ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

“ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ”

ಎಂಬ ಬಸವಣ್ಣನವರ ವಚನವನ್ನು ಕುಮಾರಸ್ವಾಮಿಯವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಶುಕ್ರವಾರದಂತು ಸರಳ ರೀತಿಯಲ್ಲಿ ನಡೆಸಿದ್ದರು. ಆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಆದರೆ ನಿನ್ನೆ ಯಡಿಯೂರಪ್ಪನವರು “ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ. ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.


ಇದನ್ನೂ ಓದಿ: ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಎಂ ಸುಳ್ಳಿನ ಪರ ನಿಂತಿದ್ದಾರೆ. ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ ರೆಂಬುದು ಇದೇ ಜಗತ್ತಿಗೆ ಗೊತ್ತಿದೆ.
    ಬಸವಣ್ಣ ನಾ ವಚನ heli, ಅದಕ್ಕೆ ಅವಮಾನ ಮಾಡ್ಬೇಡಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...