Homeಕರ್ನಾಟಕಕೆಂಪೇಗೌಡ ಜಯಂತೋತ್ಸವ: 108 ಅಡಿ ಕೆಂಪೇಗೌಡರ ಪ್ರತಿಮೆಗೆ ಶಂಕುಸ್ಥಾಪನೆ ಮಾಡಿದ ಸಿಎಂ

ಕೆಂಪೇಗೌಡ ಜಯಂತೋತ್ಸವ: 108 ಅಡಿ ಕೆಂಪೇಗೌಡರ ಪ್ರತಿಮೆಗೆ ಶಂಕುಸ್ಥಾಪನೆ ಮಾಡಿದ ಸಿಎಂ

- Advertisement -
- Advertisement -

ಇಂದು ಬೆಂಗಳೂರು ನಗರ ನಿರ್ಮಾರ್ತೃ ಕೆಂಪೇಗೌಡರ 511 ನೇ ಜಯಂತೋತ್ಸವ. ಇದರ ಅಂಗವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪತ್ರಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಾಗೂ 23 ಎಕರೆ ಪ್ರದೇಶದಲ್ಲಿ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಬೆಳಿಗ್ಗೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ಕೆಂಪೇಗೌಡರ ಸೇವೆ ಅಪಾರ. ದೊಡ್ಡ ನದಿ ಮೂಲ ಇಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿ, ಬೆಂಗಳೂರು ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದು ಕೆಂಪೇಗೌಡರು ಎಂದು ಯಡಿಯೂರಪ್ಪ ಹೇಳಿದ್ದಾರೆ.

ದೂರದೃಷ್ಟಿಯ ಕೆಂಪೇಗೌಡರು ಅಂದು ನಿರ್ಮಾಣ ಮಾಡಿದ ಚಿಕ್ಕಪೇಟೆ, ಅಕ್ಕಿಪೇಟೆಗಳೇ ಇಂದು ವಾಣಿಜ್ಯ ಕೇಂದ್ರಗಳಾಗಿವೆ. ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಕೆಂಪೇಗೌಡರ ಹೆಸರು ಚಿರಸ್ಥಾಯಿಗೊಳಿಸಲು ಇಂತಹ ಯೋಜನೆ ಸಹಕಾರಿಯಾಗುತ್ತದೆ.

ಈ ವರ್ಷದಲ್ಲಿ ಪ್ರತಿಮೆಯನ್ನು ಪೂರ್ಣಗೊಳಿಸುತ್ತೇವೆ. ಅದರ ಉದ್ಘಾಟನೆಗೆ ಎಲ್ಲರೂ ಸೇರೋಣ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಪಾಲ್ಗೊಂಡಿದ್ದರು.

ಎಚ್.ಡಿ.ದೇವೇಗೌಡ ಮಾತನಾಡಿ, ಇದೊಂದು ಅಭೂತಪೂರ್ವ ಕಾರ್ಯಕ್ರಮ. ಯಡಿಯೂರಪ್ಪ 108 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವುದ ಜೊತೆಗೆ ಅಧುನಿಕ ಉದ್ಯಾನವನ ‌ನಿರ್ಮಾಣ ಮಾಡುವ ಒಮ್ಮತದ ನಿರ್ಧಾರ ತೆಗೊಂಡಿದ್ದಾರೆ. ಯಾವುದೇ ಪಕ್ಷಭೇದ ಇಲ್ಲದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಹೇಳಿದರು.

ಪಕ್ಷಭೇದವಿಲ್ಲದೇ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೆಚ್ಚು ಉತ್ಸಾಹದಿಂದ ಈ ಯೋಜನೆ ಕೈಗೊಂಡಿದ್ದಾರೆ. ಅತೀ ಶೀಘ್ರವಾಗಿ ಪ್ರತಿಮೆ ಕೆಲಸ ಆರಂಭ ಆಗಬೇಕು.ಈ ಕಾರ್ಯಕ್ರಮ ಎಲ್ಲರ ಐಕ್ಯತೆಯಿಂದ ಆರಂಭವಾಗಿದೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಮಾತನಾಡಿ, ಇದು ಅತಿ ಹೆಚ್ಚು ಸಂತೋಷ ತಂದ ದಿನ. ದೇವನಹಳ್ಳಿ ಜನರನ್ನು ಯಾರೂ ಸಹ ಮರೆಯಲು ಸಾಧ್ಯವಿಲ್ಲ. ಈ ಭಾಗದ ರೈತರು ಜನರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಜನತೆಗೆ ಕೆಂಪೇಗೌಡರನ್ನು ಪರಿಚಯ ಮಾಡುವ ಕೆಲಸ ಸರ್ಕಾರ ಮಾಡಿದೆ. ಸರ್ಕಾರದ ಈ ಒಳ್ಳೆಯ ಕೆಲಸಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ. ಭಾರತವನ್ನು ಬೆಂಗಳೂರಿನ ಮೂಲಕ ಇಡೀ ವಿಶ್ವವೇ ನೋಡುತ್ತಿದೆ. ಯಡಿಯೂರಪ್ಪ ಅವರ ಈ ದೊಡ್ಡ ಕೆಲಸಕ್ಕೆ ಶುಭಹಾರೈಸುವುದಾಗಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...