Homeಕರ್ನಾಟಕಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

ನನ್ನಿಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನ ಅತೀವ ದುಃಖ ತಂದಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ನಿಧನಕ್ಕೆ ಕನ್ನಡ ನಾಡು ಕಂಬನಿ ಮಿಡಿದಿದೆ. ನಟಿಯ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

“ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ನನ್ನಿಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನ ಅತೀವ ದುಃಖ ತಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

’”ಅಭಿನಯ ಶಾರದೆ’ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ‌ ಭಗವಂತ ನೀಡಲಿ” ಎಂದಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

“ಓಬವ್ವ ಅಂದರೆ ನಮಗೆ ನೆನಪಿಗೆ ಬರುವುದು ಅಭಿನಯ ಶಾರದೆ ಜಯಂತಿ ಅಮ್ಮನವರೇ.. ಅಷ್ಟು ಮನೋಘ್ನ ಅಭಿನೆತ್ರಿಯವರನ್ನು.. ನಾವು ಕಳೆದುಕೊಂಡಿದ್ದೇವೆ.. ಆದರೆ ಅವರ ಚಿತ್ರಗಳು ಎಂದೆಂದೂ ಜೀವಂತವಾಗಿರುತ್ತದೆ. ಓಂ ಶಾಂತಿ” ಎಂದು ನಿರ್ದೇಶಕ ಪವನ್ ಕುಮಾರ್‌ ನಮನ ಸಲ್ಲಿಸಿದ್ದಾರೆ.

ನಟಿ ಜಯಂತಿ ಜೊತೆಗೆ ತೆರೆ ಹಂಚಿಕೊಂಡಿರುವ ನಟ ಜಗ್ಗೇಶ್ ತಮ್ಮ ನಡುವಿನ ಸಂಬಂಧವನ್ನು ಮೆಲುಕು ಹಾಕಿದ್ದು ಹೀಗೆ. “ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ.. ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ.. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ ಅವಕಾಶ ಸಿಕ್ಕಿತು ಆಗ ನನ್ನ ಸಿನಿಮಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ” ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ್, ಎಚ್.ಸಿ.ಮಹಾದೇವಪ್ಪಾ, ನಟ ದರ್ಶನ್, ಉಪ್ರೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...