Homeಕರ್ನಾಟಕಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ. ನಾವು ಮತ್ತೇ ಬೆಳೆಯುತ್ತೇವೆ, ಹೋರಾಟ ಮುಂದುವರೆಯುತ್ತದೆ ಎಂದು ಚಾನೆಲ್‌ನ ಪ್ರಿನ್ಸಿಪಲ್‌ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “ಪವರ್‌ ಟಿವಿ”ಯ ಪ್ರಸಾರವನ್ನು ತಡೆಹಿಡಿಯಲಾಗಿದೆ ಎಂದು ಮಾಧ್ಯಮದ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ನಿನ್ನೆ ರಾತ್ರಿ 10:45 ಕ್ಕೆ ತಮ್ಮ ಫೇಸ್‌‌ಬುಕ್ ಖಾತೆಯಿಂದ ಲೈವ್‌ ಮೂಲಕ ಮಾತನಾಡಿದ ರಹಮಾನ್ ಹಾಸನ್, “ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ, ಆದರೆ ಯಾಕೆ ಎಂದು ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾದ ರಹಮಾನ್, “ಇದು ಮಾಧ್ಯಮ ಲೋಕದಲ್ಲಿ ಕರಾಳ ದಿನ” ಎಂದು ಹೇಳಿದ್ದಾರೆ.

ಟಿವಿಯು ದಾಖಲೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ದ ಧ್ವನಿ ಎತ್ತುತ್ತಿದೆ. ಅದಕ್ಕಾಗಿ ಚಾನೆಲ್ ಎಂ.ಡಿ ಮೇಲೆ ಕೇಸು ಹಾಕುವುದು ಹಾಗೂ ತನಿಖೆ ನಡೆಸುವುದು ನಿಮ್ಮ ಸ್ವಾತಂತ್ಯ್ರ, ಆದರೆ ಒಂದು ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ, ಈಗ ಎಲ್ಲರೂ ಬೀದಿಗೆ ಬಂದಿದ್ದೇವೆ. ಇದು ಸರಿಯಲ್ಲ ಯಡಿಯೂರಪ್ಪನವರೇ ಎಂದು ರಹಮಾನ್ ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

“ಆದರೆ ನಮ್ಮ ಕೆಲಸ ಸತ್ಯಕ್ಕಾಗಿ ಧ್ವನಿ ಎತ್ತಿರುವಂತದ್ದು. ವಿಜಯೇಂದ್ರ ಅವರ ಭ್ರಷ್ಟಾಚಾರ ಸಂಬಂಧಪಟ್ಟಂತೆ ಮಾಡಿರುವ ವರದಿ ಮುಂದುವರೆಯುತ್ತದೆ. ನಮ್ಮ ಚಾನೆಲ್‌ ಅನ್ನು ನೀವು ಮುಗಿಸಿರಬಹುದು, ಫೇಸ್‌ಬುಕ್ ಖಾತೆಯನ್ನು ಮುಗಿಸಿರಬಹುದು. ಆದರೆ ನಮ್ಮದೆ ವೈಯಕ್ತಿಕ ಫೇಸ್‌ಬುಕ್‌ ಖಾತೆಗಳಿವೆ. ಅದನ್ನು ಮುಗಿಸಿದರೆ ನಾವು ಇನ್ನೊಂದು ಖಾತೆಯನ್ನು ತೆರೆಯುತ್ತೇವೆ ಆದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

“ನಿಮ್ಮ ರಾಜಾಹುಲಿ ಎಂಬ ಬಿರುದು ನಾವು ಮಾಧ್ಯಮವೇ ಕೊಟ್ಟಿರುವುದು, ಆದರೆ ಇದು ರಾಜಾಹುಲಿ ಮಾಡುವ ಕೆಲಸವೇ ಯಡಿಯೂರಪ್ಪನವರೇ? ನಿಮ್ಮಲ್ಲಿ ಅಧಿಕಾರ ಇರಬಹುದು, ಪೊಲೀಸರು ಇರಬಹುದು. ನೀವು ಏನು ಬೇಕಾದರೂ ಮಾಡಬಹುದು ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ಸುದ್ದಿ ಮಾಡಬಾರದು ಎಂದು ಕೋರ್ಟ್‌ನಿಂದ ಇಂಜೆಕ್ಷನ್ ಬಂದಿದೆ. ಆದರೆ ನಾವು ಸುಖಾಸುಮ್ಮನೆ ಇಲ್ಲಸಲ್ಲದ ಸುದ್ದಿ ಮಾಡಿಲ್ಲ. ನಮ್ಮಲ್ಲಿ ಎಲ್ಲಾ ದಾಖಲೆ ಇದೆ. ಸಿಸಿಬಿ ತನಿಖೆಗೂ ನಾವು ಸಹಕಾರ ಕೊಟ್ಟಿದ್ದೇವೆ. ಆದರೆ ಚಾನೆಲ್ ಯಾಕೆ ಬಂದ್ ಮಾಡಿದ್ದೀರಿ” ಎಂದು ಮುಖ್ಯಮಂತ್ರಿಯವರಿಗೆ ಪ್ರಶ್ನಿಸಿದ್ದಾರೆ.

“ಇವತ್ತು ನಮ್ಮ ಚಾನೆಲನ್ನು ಮುಗಿಸಿದ್ದಾರೆ. ಮುಂದೊಂದು ದಿನ ಬೇರೆ ಚಾನೆಲ್‌ಗೂ ಇಂತಹ ಪರಿಸ್ಥಿತಿ ಬರಬಹುದು. ಇದು ಪತ್ರಕರ್ತರು ಒಗ್ಗಟ್ಟಾಗುವ ಸಮಯ ಇದು. ರಾಜ್ಯದಲ್ಲಿ ಬೇಕಾದಷ್ಟು ಚಾನೆಲ್ ಬೇರೆ ಬೇರೆ ಕಾರಣಗಳಿಗೆ ಮುಚ್ಚಿಹೋಗಿದೆ. ಆದರೆ ಇಂತಹ ಕಾರಕ್ಕೆ ಯಾವ ಚಾನೆಲ್‌ಗಳು ಕೂಡಾ ಮುಚ್ಚಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

Posted by Rahman Hassan on Monday, September 28, 2020

“ನಾವು ಮಾಡಿರುವ ಕೆಲಸಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಡಿಯೂರಪ್ಪನವರೆ ನಿಮ್ಮ ಕೆಲಸ ನಾಚಿಗೇಡು. ಒಂದು ಚಾನೆಲ್‌ ಅನ್ನು ಮುಚ್ಚಿಸುವಷ್ಟು ಕೆಳಹಂತಕ್ಕೆ ಹೋಗುತ್ತೀರಿ ಎಂದು ಭಾವಿಸಿರಲಿಲ್ಲ. ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ, ನಾವು ಮತ್ತೇ ಬೆಳೆಯುತ್ತೇವೆ” ಎಂದು ರಹಮಾನ್ ಹೇಳಿದ್ದಾರೆ.

“ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

ವಿಡಿಯೋ ನೋಡಿ:

ರೈತ ಹೋರಾಟಕ್ಕೆ ಬೆಂಬಲ ನೀಡಿ ವಿದ್ಯಾರ್ಥಿ ನಾಯಕ ಸರೋವರ್ ಬೆಂಕಿಕೆರೆಯ ಕಿಡಿನುಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...