Homeಕರ್ನಾಟಕಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ. ನಾವು ಮತ್ತೇ ಬೆಳೆಯುತ್ತೇವೆ, ಹೋರಾಟ ಮುಂದುವರೆಯುತ್ತದೆ ಎಂದು ಚಾನೆಲ್‌ನ ಪ್ರಿನ್ಸಿಪಲ್‌ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “ಪವರ್‌ ಟಿವಿ”ಯ ಪ್ರಸಾರವನ್ನು ತಡೆಹಿಡಿಯಲಾಗಿದೆ ಎಂದು ಮಾಧ್ಯಮದ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ನಿನ್ನೆ ರಾತ್ರಿ 10:45 ಕ್ಕೆ ತಮ್ಮ ಫೇಸ್‌‌ಬುಕ್ ಖಾತೆಯಿಂದ ಲೈವ್‌ ಮೂಲಕ ಮಾತನಾಡಿದ ರಹಮಾನ್ ಹಾಸನ್, “ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ, ಆದರೆ ಯಾಕೆ ಎಂದು ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾದ ರಹಮಾನ್, “ಇದು ಮಾಧ್ಯಮ ಲೋಕದಲ್ಲಿ ಕರಾಳ ದಿನ” ಎಂದು ಹೇಳಿದ್ದಾರೆ.

ಟಿವಿಯು ದಾಖಲೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ದ ಧ್ವನಿ ಎತ್ತುತ್ತಿದೆ. ಅದಕ್ಕಾಗಿ ಚಾನೆಲ್ ಎಂ.ಡಿ ಮೇಲೆ ಕೇಸು ಹಾಕುವುದು ಹಾಗೂ ತನಿಖೆ ನಡೆಸುವುದು ನಿಮ್ಮ ಸ್ವಾತಂತ್ಯ್ರ, ಆದರೆ ಒಂದು ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ, ಈಗ ಎಲ್ಲರೂ ಬೀದಿಗೆ ಬಂದಿದ್ದೇವೆ. ಇದು ಸರಿಯಲ್ಲ ಯಡಿಯೂರಪ್ಪನವರೇ ಎಂದು ರಹಮಾನ್ ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

“ಆದರೆ ನಮ್ಮ ಕೆಲಸ ಸತ್ಯಕ್ಕಾಗಿ ಧ್ವನಿ ಎತ್ತಿರುವಂತದ್ದು. ವಿಜಯೇಂದ್ರ ಅವರ ಭ್ರಷ್ಟಾಚಾರ ಸಂಬಂಧಪಟ್ಟಂತೆ ಮಾಡಿರುವ ವರದಿ ಮುಂದುವರೆಯುತ್ತದೆ. ನಮ್ಮ ಚಾನೆಲ್‌ ಅನ್ನು ನೀವು ಮುಗಿಸಿರಬಹುದು, ಫೇಸ್‌ಬುಕ್ ಖಾತೆಯನ್ನು ಮುಗಿಸಿರಬಹುದು. ಆದರೆ ನಮ್ಮದೆ ವೈಯಕ್ತಿಕ ಫೇಸ್‌ಬುಕ್‌ ಖಾತೆಗಳಿವೆ. ಅದನ್ನು ಮುಗಿಸಿದರೆ ನಾವು ಇನ್ನೊಂದು ಖಾತೆಯನ್ನು ತೆರೆಯುತ್ತೇವೆ ಆದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

“ನಿಮ್ಮ ರಾಜಾಹುಲಿ ಎಂಬ ಬಿರುದು ನಾವು ಮಾಧ್ಯಮವೇ ಕೊಟ್ಟಿರುವುದು, ಆದರೆ ಇದು ರಾಜಾಹುಲಿ ಮಾಡುವ ಕೆಲಸವೇ ಯಡಿಯೂರಪ್ಪನವರೇ? ನಿಮ್ಮಲ್ಲಿ ಅಧಿಕಾರ ಇರಬಹುದು, ಪೊಲೀಸರು ಇರಬಹುದು. ನೀವು ಏನು ಬೇಕಾದರೂ ಮಾಡಬಹುದು ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ಸುದ್ದಿ ಮಾಡಬಾರದು ಎಂದು ಕೋರ್ಟ್‌ನಿಂದ ಇಂಜೆಕ್ಷನ್ ಬಂದಿದೆ. ಆದರೆ ನಾವು ಸುಖಾಸುಮ್ಮನೆ ಇಲ್ಲಸಲ್ಲದ ಸುದ್ದಿ ಮಾಡಿಲ್ಲ. ನಮ್ಮಲ್ಲಿ ಎಲ್ಲಾ ದಾಖಲೆ ಇದೆ. ಸಿಸಿಬಿ ತನಿಖೆಗೂ ನಾವು ಸಹಕಾರ ಕೊಟ್ಟಿದ್ದೇವೆ. ಆದರೆ ಚಾನೆಲ್ ಯಾಕೆ ಬಂದ್ ಮಾಡಿದ್ದೀರಿ” ಎಂದು ಮುಖ್ಯಮಂತ್ರಿಯವರಿಗೆ ಪ್ರಶ್ನಿಸಿದ್ದಾರೆ.

“ಇವತ್ತು ನಮ್ಮ ಚಾನೆಲನ್ನು ಮುಗಿಸಿದ್ದಾರೆ. ಮುಂದೊಂದು ದಿನ ಬೇರೆ ಚಾನೆಲ್‌ಗೂ ಇಂತಹ ಪರಿಸ್ಥಿತಿ ಬರಬಹುದು. ಇದು ಪತ್ರಕರ್ತರು ಒಗ್ಗಟ್ಟಾಗುವ ಸಮಯ ಇದು. ರಾಜ್ಯದಲ್ಲಿ ಬೇಕಾದಷ್ಟು ಚಾನೆಲ್ ಬೇರೆ ಬೇರೆ ಕಾರಣಗಳಿಗೆ ಮುಚ್ಚಿಹೋಗಿದೆ. ಆದರೆ ಇಂತಹ ಕಾರಕ್ಕೆ ಯಾವ ಚಾನೆಲ್‌ಗಳು ಕೂಡಾ ಮುಚ್ಚಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

Posted by Rahman Hassan on Monday, September 28, 2020

“ನಾವು ಮಾಡಿರುವ ಕೆಲಸಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಡಿಯೂರಪ್ಪನವರೆ ನಿಮ್ಮ ಕೆಲಸ ನಾಚಿಗೇಡು. ಒಂದು ಚಾನೆಲ್‌ ಅನ್ನು ಮುಚ್ಚಿಸುವಷ್ಟು ಕೆಳಹಂತಕ್ಕೆ ಹೋಗುತ್ತೀರಿ ಎಂದು ಭಾವಿಸಿರಲಿಲ್ಲ. ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ, ನಾವು ಮತ್ತೇ ಬೆಳೆಯುತ್ತೇವೆ” ಎಂದು ರಹಮಾನ್ ಹೇಳಿದ್ದಾರೆ.

“ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

ವಿಡಿಯೋ ನೋಡಿ:

ರೈತ ಹೋರಾಟಕ್ಕೆ ಬೆಂಬಲ ನೀಡಿ ವಿದ್ಯಾರ್ಥಿ ನಾಯಕ ಸರೋವರ್ ಬೆಂಕಿಕೆರೆಯ ಕಿಡಿನುಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...